‘ನನ್ನ ಪತ್ನಿಗೆ ಅಪ್ಪು ತುಂಬ ಕ್ಲೋಸ್​’; ಪುನೀತ್​ ನಿವಾಸಕ್ಕೆ ಭೇಟಿ ನೀಡಿದ ಅರ್ಜುನ್​ ಸರ್ಜಾ ಭಾವುಕ ಮಾತು

ನಟ ಅರ್ಜುನ್​ ಸರ್ಜಾ ಮತ್ತು ಅವರ ಪತ್ನಿ ನಿವೇದಿತಾ (ಆಶಾ ರಾಣಿ) ಅವರು ಪುನೀತ್​ ರಾಜ್​ಕುಮಾರ್​ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅಪ್ಪು ಕುರಿತು ಅರ್ಜುನ್​ ಸರ್ಜಾ ಮಾತನಾಡಿದ್ದಾರೆ.

‘ನನ್ನ ಪತ್ನಿಗೆ ಅಪ್ಪು ತುಂಬ ಕ್ಲೋಸ್​’; ಪುನೀತ್​ ನಿವಾಸಕ್ಕೆ ಭೇಟಿ ನೀಡಿದ ಅರ್ಜುನ್​ ಸರ್ಜಾ ಭಾವುಕ ಮಾತು
| Updated By: ಮದನ್​ ಕುಮಾರ್​

Updated on: Feb 16, 2022 | 7:24 PM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡ ನೋವು ಎಂದಿಗೂ ಕೊನೆ ಆಗುವಂಥದ್ದಲ್ಲ. ಅಪ್ಪು ನೆನಪು ಪ್ರತಿದಿನ ಕಾಡುತ್ತಲೇ ಇರುತ್ತದೆ. ಇಂದಿಗೂ ಅವರ ನಿವಾಸಕ್ಕೆ ಅನೇಕ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಅನೇಕರು ಸಾಂತ್ವನ ಹೇಳುತ್ತಿದ್ದಾರೆ. ಇಂದು (ಫೆ.16) ಖ್ಯಾತ ನಟ ಅರ್ಜುನ್​ ಸರ್ಜಾ (Arjun Sarja) ಹಾಗೂ ಅವರ ಪತ್ನಿ ನಿವೇದಿತಾ (Niveditha Arjun) ಅವರು ಪುನೀತ್​ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅಪ್ಪು ಜೊತೆಗಿನ ಒಡನಾಟವನ್ನು ಅರ್ಜುನ್​ ಸರ್ಜಾ ನೆನಪಿಸಿಕೊಂಡಿದ್ದಾರೆ. ‘ಪುನೀತ್ ನಿಧನರಾಗಿ ಮೂರು ತಿಂಗಳು ಆಯ್ತು. ಈ ಹಿಂದೆ ನಾನು ಬಂದು ಹೋಗಿದ್ದೆ. ಆದರೆ ನನ್ನ ಹೆಂಡತಿ ಬಂದಿರಲಿಲ್ಲ. ಅಪ್ಪು ಅವರಿಗೆ ನನ್ನ ಹೆಂಡತಿ ತುಂಬ ಕ್ಲೋಸ್​. ಚಿಕ್ಕ ವಯಸ್ಸಿನಿಂದಲೂ ಜೊತೆಯಲ್ಲಿ ಬೆಳೆದವರು. ಹಾಗಾಗಿ ಪತ್ನಿ ಜೊತೆ ಬಂದು ಪುನೀತ್​ ಕುಟುಂಬದವರ ಯೋಗಕ್ಷೇಮ ವಿಚಾರಿಸಿದ್ದೇನೆ. ಅಪ್ಪು ಬಗ್ಗೆ ಎಷ್ಟು ಹೇಳಿದರೂ ಅದು ಕಮ್ಮಿ. ಇಷ್ಟು ಚಿಕ್ಕ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿರುವ ಹುಡುಗನನ್ನು ಎಷ್ಟು ನೆನಪಿಸಿಕೊಂಡರೂ ಅದು ಕಮ್ಮಿ ಎನಿಸುತ್ತದೆ. ಅಪ್ಪು ನಿಧನದ ಬಳಿಕ ಬದುಕು ಡಿಪ್ರೆಸ್​ ಆಯಿತು. ನಮಗೆ ಹೀಗಾಗಿರುವಾಗ ಅವರ ಕುಟುಂಬಕ್ಕೆ ಎಷ್ಟು ನೋವಾಗಿರುತ್ತದೆ ಎಂಬುದನ್ನು ನಾವು ಊಹಿಸಬಹುದು. ಕಷ್ಟದಲ್ಲಿ ನಾವಿದ್ದೇವೆ ಅಂತ ಹೇಳಬಹುದು. ಇನ್ನೇನೂ ಹೇಳಲು ಸಾಧ್ಯವಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

ಇದನ್ನೂ ಓದಿ:

‘ದ್ವಿತ್ವ’ ಸಿನಿಮಾದಲ್ಲಿ ಪುನೀತ್​ ಬದಲು ಬೇರೆಯವರು ನಟಿಸ್ತಾರಾ? ತಂಡದಿಂದ ಸಿಕ್ತು ಉತ್ತರ

ಪುನೀತ್​ ಅಭಿನಯದ ‘ಜೇಮ್ಸ್’ ಟೀಸರ್​ ನೋಡಿ ವಿಶೇಷ ಸಾಲುಗಳನ್ನು ಬರೆದುಕೊಂಡ ನಟ ಪ್ರಭಾಸ್

Follow us
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?