‘ರಾಜಮಾರ್ತಾಂಡ’ ಚಿತ್ರಕ್ಕೆ ವಿಶ್ ಮಾಡಿದ ನಟ ಅರ್ಜುನ್ ಸರ್ಜಾ

ಚಿರಂಜೀವಿ ಸರ್ಜಾ ನಟನೆಯ ‘ರಾಜಮಾರ್ತಾಂಡ’ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗುತ್ತಿದೆ. ಅವರು ಇಲ್ಲ ಎಂಬ ನೋವಿನಲ್ಲೇ ಅಭಿಮಾನಿಗಳು ಸಿನಿಮಾ ವೀಕ್ಷಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಸರ್ಜಾ ಅವರು ವಿಶ್ ಮಾಡಿದ್ದಾರೆ.

‘ರಾಜಮಾರ್ತಾಂಡ’ ಚಿತ್ರಕ್ಕೆ ವಿಶ್ ಮಾಡಿದ ನಟ ಅರ್ಜುನ್ ಸರ್ಜಾ
|

Updated on: Oct 05, 2023 | 2:59 PM

ಚಿರಂಜೀವಿ ಸರ್ಜಾ (Chiranjeevi Sarja) ನಟನೆಯ ‘ರಾಜಮಾರ್ತಾಂಡ’ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗುತ್ತಿದೆ. ಅವರು ಇಲ್ಲ ಎಂಬ ನೋವಿನಲ್ಲೇ ಅಭಿಮಾನಿಗಳು ಸಿನಿಮಾ ವೀಕ್ಷಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಸರ್ಜಾ ಅವರು ವಿಶ್ ಮಾಡಿದ್ದಾರೆ. ‘ನಮ್ಮ ಮನೆಯ ರಾಜಕುಮಾರ್, ನಿಮ್ಮೆಲ್ಲರ ಪ್ರೀತಿಯ ಚಿರು ಸರ್ಜಾ ನಟಿಸಿದ ಚಿತ್ರ ರಾಜಮಾರ್ತಾಂಡ ಬಿಡುಗಡೆಗೆ ಆಗುತ್ತಿದೆ. ತಂಡದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಚಿರು-ಧ್ರುವ ಒಟ್ಟಿಗೆ ನಟಿಸಬೇಕು ಎನ್ನುವ ಆಸೆ ಇತ್ತು. ಆದರೆ, ಅದು ಆಗಿಲ್ಲ. ಆದರೆ, ಈ ಚಿತ್ರದ ಮೂಲಕ ಕನಸು ಈಡೇರುತ್ತಿದೆ. ಚಿರು ಅಭಿನಯಕ್ಕೆ ತಮ್ಮನ ಧ್ವನಿ ಇರುತ್ತದೆ. ಇಬ್ಬರನ್ನೂ ನೋಡಿದಂತಾಗುತ್ತದೆ’ ಎಂದಿದ್ದಾರೆ ಅರ್ಜುನ್ ಸರ್ಜಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us