ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಹೇಳಿಕೆ

Updated on: Sep 18, 2025 | 10:31 PM

ಭಾರತೀಯ ರಕ್ಷಣಾ ಪಡೆಗಳು ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವಾಗಿದೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪ್ರತಿಪಾದಿಸಿದ್ದಾರೆ. ಮಕ್ಕಳು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ಸ್ಥಳಗಳನ್ನು ಅನ್ವೇಷಿಸಲು ಸಶಸ್ತ್ರ ಪಡೆಗಳಿಗೆ ಸೇರಲು ಆಕಾಂಕ್ಷಿಯಾಗಬೇಕೆಂದು ಅವರು ಒತ್ತಾಯಿಸಿದರು. ಸೇನೆ ಮಾತ್ರ ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವಾಗಿದೆ. ನೀವು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ಮತ್ತು ಜಗತ್ತನ್ನು ಅನ್ವೇಷಿಸಲು ಬಯಸಿದರೆ ನೀವು ಸಶಸ್ತ್ರ ಪಡೆಗಳಿಗೆ ಸೇರಬೇಕು ಎಂದು ಅವರು ಹೇಳಿದ್ದಾರೆ.

ರಾಂಚಿ, ಸೆಪ್ಟೆಂಬರ್ 18: ಜಾರ್ಖಂಡ್‌ನ ರಾಂಚಿಯಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದದ ಸಂದರ್ಭದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ (Anil Chauhan) ಆಪರೇಷನ್ ಸಿಂಧೂರ್ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. “ಮೇ 8ರ ಬೆಳಿಗ್ಗೆ 5.30ರಿಂದ 6 ಗಂಟೆ ದಾಳಿ ನಡೆಸಲು ನಮಗೆ ಉತ್ತಮ ಸಮಯವಾಗಿತ್ತು. ಆದರೆ ಆ ಸಮಯದಲ್ಲಿ, ಬಹವಾಲ್ಪುರ್ ಮತ್ತು ಮುರಿಯ್ಕೆಯಲ್ಲಿ ಮೊದಲ ಅಜಾನ್ ಅಥವಾ ಮೊದಲ ಪ್ರಾರ್ಥನೆ ನಡೆಯುತ್ತಿತ್ತು. ಆ ಸಮಯದಲ್ಲಿ ಸಾಕಷ್ಟು ಜನರು ಓಡಾಡುತ್ತಿದ್ದರು. ಆಗ ನಾವು ದಾಳಿ ನಡೆಸಿದರೆ ಪಾಕಿಸ್ತಾನದ ಅನೇಕ ಅಮಾಯಕ ಜನರು ಕೊಲ್ಲಲ್ಪಡುವ ಅಪಾಯವಿತ್ತು. ನಾವು ಅದನ್ನು ತಪ್ಪಿಸಲು ಬಯಸಿದ್ದೆವು. ನಮ್ಮ ಗುರಿ ಉಗ್ರರು ಮಾತ್ರ ಆಗಿತ್ತು. ಅದಕ್ಕಾಗಿಯೇ ನಾವು ರಾತ್ರಿ 1ರಿಂದ 1.30ರ ನಡುವಿನ ಸಮಯವನ್ನು ಆರಿಸಿಕೊಂಡೆವು” ಎಂದಿದ್ದಾರೆ. ಹಾಗೇ, ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಅದು ಸೇನೆ ಅಥವಾ ಸಶಸ್ತ್ರ ಪಡೆಗಳು ಎಂದು ಅವರು ಹೇಳಿದ್ದಾರೆ. ಮಕ್ಕಳು ಸೇನೆಗೆ ಸೇರಲು ಮನಸು ಮಾಡಬೇಕು ಎಂದು ಅನಿಲ್ ಚೌಹಾಣ್ ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More