ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪಿಠೋಪಕರಣಗಳ ವ್ಯವಸ್ಥೆ ಮಾಡಿ: ಹೆಚ್ಡಿ ರೇವಣ್ಣ
ಹಾಸನದಲ್ಲಿನ ಇಂಜಿನಿಯರಿಂಗ್ ಕಾಲೇಜಿಗೆ ಅನುದಾನ ಬಿಡುಗಡೆ ಮಾಡಿ ಪಿಠೋಪಕರಣ ಮತ್ತು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಅನುಕೂಲತೆಗಳನ್ನು ಮಾಡಿಕೊಡುವಂತೆ ಹೆಚ್.ಡಿ. ರೇವಣ್ಣ ಮನವಿ ಮಾಡಿದ್ದಾರೆ.
ಬೆಳಗಾವಿ: ಸದನದಲ್ಲಿ ನಿನ್ನೆ (ಡಿಸೆಂಬರ್ 21) ಹೆಚ್.ಡಿ. ರೇವಣ್ಣ ಅವರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಹಾಸನದಲ್ಲಿನ ಇಂಜಿನಿಯರಿಂಗ್ ಕಾಲೇಜಿಗೆ ಅನುದಾನ ಬಿಡುಗಡೆ ಮಾಡಿ ಪಿಠೋಪಕರಣ ಮತ್ತು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಅನುಕೂಲತೆಗಳನ್ನು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಉಪನ್ಯಾಸಕರ ಹುದ್ದೆ ಕೂಡ ಇಲ್ಲಿ ಖಾಲಿ ಇದ್ದು, ಅತಿಥಿ ಉಪನ್ಯಾಸಕರು ಸಂಪೂರ್ಣವಾಗಿ ಇಲ್ಲದಂತಾಗಿದೆ. ಹೀಗಾಗಿ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ. ಸರ್ಕಾರಿ ಶಾಲಾ- ಕಾಲೇಜುಳಿಗೆ ಲಾಕ್ಡೌನ್ ನಂತರ ಮಕ್ಕಳ ಒಲವು ಹೆಚ್ಚಾಗಿದೆ ಎಂದು ಕೂಡ ಹೆಚ್.ಡಿ ರೇವಣ್ಣ ಈ ವೇಳೆ ಪ್ರಸ್ತಾಪಿಸಿದ್ದಾರೆ.
ಮತಾಂತರ ಕಾಯ್ದೆ ಮಂಡನೆ
ಬೆಳಗಾವಿ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಬಿಜೆಪಿ ಸರ್ಕಾರ ಮತಾಂತರ ಕಾಯ್ದೆ 2021 ತಿದ್ದುಪಡೆ ಮಸೂದೆಯನ್ನ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಬಗ್ಗೆ ವಿರೋಧ ಪಕ್ಷಗಳ ಪ್ರತಿರೋಧವಿದ್ದರೂ ಆಡಳಿತ ಪಕ್ಷ ಮಸೂದೆಯನ್ನ ಮಂಡಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ:
ರೇಪ್ ಆಸ್ವಾದಿಸುವ ಹೇಳಿಕೆ: ಡಬಲ್ ಫಾಲ್ಟ್ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇಂದು ಬೆಳಗಾವಿಯಲ್ಲಿ ಹೇಳಿದ್ದೇನು?
Published on: Dec 22, 2021 08:54 AM
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

