AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣರನ್ನು ಬಂಧಿಸಿದ್ದು ಒಂದು ರಾಜಕೀಯ ಪಿತೂರಿ ಅಂತ ರಾಜ್ಯದ ಜನತೆಗೆ ಗೊತ್ತಾಗಿದೆ: ಸಾರಾ ಮಹೇಶ್

ರೇವಣ್ಣರನ್ನು ಬಂಧಿಸಿದ್ದು ಒಂದು ರಾಜಕೀಯ ಪಿತೂರಿ ಅಂತ ರಾಜ್ಯದ ಜನತೆಗೆ ಗೊತ್ತಾಗಿದೆ: ಸಾರಾ ಮಹೇಶ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 14, 2024 | 5:04 PM

Share

ಎಲೆಕ್ಟ್ರಾನಿಕ್ ಮೀಡಿಯಾಗಳಲ್ಲಿ ದಿನಕ್ಕೊಂದು ಬಗೆಯ ಚರ್ಚೆಯನ್ನು ಜನ ನೋಡುತ್ತಿದ್ದಾರೆ. ಸರ್ಕಾರದ ಮುಂದಿನ ಯೋಜನೆ ಏನಾಗಬಹುದು ಅನ್ನೋದು ಸಹ ಚರ್ಚೆಯಾಗುತ್ತಿದೆ ಎಂದು ಮಹೇಶ್ ಹೇಳಿದರು. ಮಹಿಳೆಯೊಬ್ಬರ ಅಪಹರಣದ ಆರೋಪದಲ್ಲಿ ರೇವಣ್ಣ ಅವರನ್ನು ಸಿಲುಕಿಸಿದ್ದು ಒಂದು ರಾಜಕೀಯ ಪಿತೂರಿ ಅಂತ ನಿಷ್ಠಾವಂತ ಪೊಲಿಸರು ಸಹ ಅರ್ಥಮಾಡಿಕೊಂಡಿದ್ದಾರೆ ಎಂದು ಮಹೇಶ್ ಹೇಳಿದರು.

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ (HD Revanna) ಜೈಲಿಂದ ಬಿಡುಗಡೆಯಾಗಿ ಅವರ ತಂದೆಯ ಮನೆಗೆ ಬಂದ ಸುದ್ದಿ ಕೇಳಿ ಅವರನ್ನು ನೋಡಲು ಮತ್ತು ಮಾತಾಡಿಸಲು ಹಲವಾರು ಜೆಡಿಎಸ್ ನಾಯಕರು ಹೆಚ್ ಡಿ ದೇವೇಗೌಡರ (HD Devegowda) ಮನೆಗೆ ಬರುತ್ತಿದ್ದಾರೆ. ಮಂಡ್ಯದಿಂದ ಅಗಮಿಸಿದ ಮಾಜಿ ಸಚಿವ ಸಾರಾ ಮಹೇಶ್ (Sa Ra Mahesh) ಮಾಜಿ ಪ್ರಧಾನಿಗಳ ಮನೆಯೊಳಗೆ ಹೋಗುವ ಮೊದಲು ಮಾಧ್ಯಮದವರೊಡನೆ ಮಾತಾಡಿದರು. ರೇವಣ್ಣ ಅವರನ್ನು ಬಂಧಿಸಿದ ದಿನದಿಂದ ತಾನು ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಹೇಳುತ್ತಾ ಬಂದಿರುವೆ, ಅವರನ್ನು ಟಾರ್ಗೆಟ್ ಮಾಡಲಾಗಿತ್ತು ಅನ್ನೋದು ರಾಜ್ಯದ ಜನತೆಗೂ ಈಗ ಸ್ಪಷ್ಟವಾಗಿದೆ. ಎಲೆಕ್ಟ್ರಾನಿಕ್ ಮೀಡಿಯಾಗಳಲ್ಲಿ ದಿನಕ್ಕೊಂದು ಬಗೆಯ ಚರ್ಚೆಯನ್ನು ಜನ ನೋಡುತ್ತಿದ್ದಾರೆ. ಸರ್ಕಾರದ ಮುಂದಿನ ಯೋಜನೆ ಏನಾಗಬಹುದು ಅನ್ನೋದು ಸಹ ಚರ್ಚೆಯಾಗುತ್ತಿದೆ ಎಂದು ಮಹೇಶ್ ಹೇಳಿದರು. ಮಹಿಳೆಯೊಬ್ಬರ ಅಪಹರಣದ ಆರೋಪದಲ್ಲಿ ರೇವಣ್ಣ ಅವರನ್ನು ಸಿಲುಕಿಸಿದ್ದು ಒಂದು ರಾಜಕೀಯ ಪಿತೂರಿ ಅಂತ ನಿಷ್ಠಾವಂತ ಪೊಲಿಸರು ಸಹ ಅರ್ಥಮಾಡಿಕೊಂಡಿದ್ದಾರೆ ಎಂದು ಮಹೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಜೈಲಿಂದ ನೇರವಾಗಿ ದೇವೇಗೌಡರ ಮನೆಗೆ ಬಂದಿರುವ ಹೆಚ್ ಡಿ ರೇವಣ್ಣರನ್ನು ನೋಡಲು ಸಾವಿರಾರು ಜನರ ಜಮಾವಣೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.