ತಮ್ಮ ಕ್ಷೇತ್ರದ ಅನುದಾನವನ್ನು ಕಸಿದುಕೊಳ್ಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಹೇಳಿದ ಅರವಿಂದ್ ಬೆಲ್ಲದ್

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಉಂಟಾಗುತ್ತಿದೆಯೇ? ಹೌದೆನ್ನುತ್ತಾರೆ ವಿರೋಧ ಪಕ್ಷದ ಶಾಸಕರು. ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳುವ ಪ್ರಕಾರ, ಆರ್ಥಿಕ ಸಲಹೆಗಾರನಾಗಿರುವ ಕಾರಣಕ್ಕೆ ಅವರ ಯಲಬುರ್ಗಾ ಕ್ಷೇತ್ರಕ್ಕೆ ಅನುದಾನ ನಿಡುಗಡೆಯಾಗಿದೆಯಂತೆ!

ತಮ್ಮ ಕ್ಷೇತ್ರದ ಅನುದಾನವನ್ನು ಕಸಿದುಕೊಳ್ಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಹೇಳಿದ ಅರವಿಂದ್ ಬೆಲ್ಲದ್
|

Updated on: Jul 22, 2024 | 9:36 PM

ಬೆಂಗಳೂರು: ವಿಧಾನಸಭಾ ಕಾರ್ಯಕಲಾಪದಲ್ಲಿ ಇಂದು ಬಂಗಾರಪೇಟೆ ಶಾಸಕ ನಾರಾಯಣಗೌಡ ಮತ್ತು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ನಡುವೆ ಬಂಗಾರಪೇಟೆ ಕ್ಷೇತ್ರಕ್ಕೆ ಆಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆಯಿತು. ಬಂಗಾರಪೇಟೆ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ ಬೆಲ್ಲದ್, ಬಿಡುಗಡೆಯಾಗಿರುವ ಹಿಂದಿನ ತರ್ಕದ ಬಗ್ಗೆ ಪ್ರಶ್ನಿಸಿದರು. ಅವರ ಪ್ರಶ್ನೆಯಿಂದ ಅಸಮಾಧಾನಗೊಂಡ ನಾರಾಯಣ ಗೌಡ, ಬಂಗಾರುಪೇಟೆಗೆ ಅನುದಾನ ಬಿಡುಗಡೆಯಾದರೆ ನಿಮಗ್ಯಾಕೆ ಕಣ್ಣುರಿ? ಬಂಗಾರುಪೇಟೆಯೇನೂ ಪಾಕಿಸ್ತಾನದಲ್ಲಿದೆಯೇ ಅಂತ ಕೇಳಿದರು. ಅದಕ್ಕೆ ಉತ್ತರಿಸಿದ ಬೆಲ್ಲದ್, ನಿಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾದರೆ ನಮಗ್ಯಾವ ಸಮಸ್ಯೆಯೂ ಇಲ್ಲ, ಅದರೆ ಧಾರವಾಡ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಅನುದಾನವನ್ನು ನೀವು ಎಳೆದುಕೊಂಡು ಹೋಗಬೇಡಿ ಅನ್ನುತ್ತಾರೆ. ಬೆಲ್ಲದ್ ಮಾತಿಗೆ ನಾರಾಯಣಗೌಡ ಉತ್ತರಿಸಲು ಎದ್ದುನಿಂತಾಗ ಸ್ಪೀಕರ್ ಖಾದರ್ ಮಧ್ಯೆ ಪ್ರವೇಶಿಸಿ ಇಬ್ಬರನ್ನೂ ಸುಮ್ಮನಾಗಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಧಿಕಾರಿಗಳನ್ನು ಬಲಿಪಶು ಮಾಡಿ ತಮ್ಮವರನ್ನು ರಕ್ಷಿಸುವ ಪ್ರಯತ್ನ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ವಿಜಯೇಂದ್ರ

Follow us
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್