ಕಾಂಗ್ರೆಸ್ ಪಕ್ಷದ ಚಿಹ್ನೆ ಕೈಯಲ್ಲಿ ಗೆರೆಗಳು ಹೆಚ್ಚಿದರೆ ಬಿಜೆಪಿ ಚಿಹ್ನೆ ಕಮಲದ ಹೂವಿನ ಬಣ್ಣ ಕೇಸರಿಯಿಂದ ಕಡುಗುಲಾಬಿ ಬಣ್ಣಕ್ಕೆ ತಿರುಗಿತು!

ಅರುಣ್​ ಕುಮಾರ್​ ಬೆಳ್ಳಿ

Updated on: Feb 08, 2023 | 1:10 PM

ಬಿಜೆಪಿಯ ಬ್ಯಾನರ್ ಮತ್ತು ಫ್ಲೆಕ್ಸ್ ಗಳಲ್ಲಿ ಪಕ್ಷದ ಚಿಹ್ನೆ ಕಮಲದ ಹೂವಿನ (lotus) ಬಣ್ಣ ಕೇಸರಿಯಿಂದ ಕಡು ಗುಲಾಬಿ ಬಣ್ಣಕ್ಕೆ ತಿರುಗಿದೆ.

ಬೆಂಗಳೂರು: ಸಾಮಾನ್ಯ ಜನರಿಗೆ ಇಂಥ ನಂಬಿಕೆಗಳು ಇರುತ್ತವೋ ಇಲ್ಲವೋ ಗೊತ್ತಿಲ್ಲ ಮಾರಾಯ್ರೇ. ಆದರೆ ನಮ್ಮ ಮೇಲೆ ದೊರೆತನ ನಡೆಸುವ ರಾಜಕಾರಣಿಗಳಿಗೆ (politicos) ನಿಶ್ಚಿತವಾಗಿಯೂ ಇರುತ್ತವೆ. ಮೊದಲು ಕಾಂಗ್ರೆಸ್ (Congress) ತನ್ನ ಪಕ್ಷದ ಕೈ ಚಿಹ್ನೆಯಲ್ಲಿದ್ದ ಗೆರೆಗಳ ಸಂಖ್ಯೆಯನ್ನು ಹೆಚ್ಚಿಸಿತು. ಈಗ ಬಿಜೆಪಿಯ ಸರದಿ. ಈ ವಿಡಿಯೋ ನೋಡಿ. ಬಿಜೆಪಿಯ ಬ್ಯಾನರ್ ಮತ್ತು ಫ್ಲೆಕ್ಸ್ ಗಳಲ್ಲಿ ಪಕ್ಷದ ಚಿಹ್ನೆ ಕಮಲದ ಹೂವಿನ (lotus) ಬಣ್ಣ ಕೇಸರಿಯಿಂದ ಕಡು ಗುಲಾಬಿ ಬಣ್ಣಕ್ಕೆ ತಿರುಗಿದೆ. ಇದು ಬೆಂಗಳೂರಿನ ದಾಸನಪುರ ಹೋಬಳಿಯ ಬಿಜೆಪಿ ಕಚೇರಿಯಲ್ಲಿ ಕಂಡುಬಂದ ದೃಶ್ಯ. ಚಿಹ್ನೆಗಳಲ್ಲಿ ಬದಲಾವಣೆ ಮಾಡಿದರೆ ಅದೃಷ್ಟವೂ ಬದಲಾಗುತ್ತದೆ ಅಂತ ನಾಯಕರು ಭಾವಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 08, 2023 01:10 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.