ಮುಖ್ಯಮಂತ್ರಿಯಾಗಿದ್ದಾಗ ವಿರೋಧ ಪಕ್ಷ ಮಾಡಿದ್ದ 8 ಅರೋಪಗಳನ್ನು ಸಿಬಿಐಗೆ ಒಪ್ಪಿಸಿದ್ದೆ, ಈ ಸರ್ಕಾರ ಒಂದಾದರೂ ನೀಡಿದೆಯಾ? ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jan 25, 2023 | 2:02 PM

ತಾನು ಮುಖ್ಯಮಂತ್ರಿಯಾಗಿದ್ದಾಗ ಎಂಟು ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದೆ ಎಂದು ಹೇಳಿದ ಅವರು ಬಿಜೆಪಿ ಸರ್ಕಾರ ಒಂದಾದರೂ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ ನೀಡಿದೆಯಾ ಎಂದರು.

ಬೆಂಗಳೂರು:  ತನ್ನ ಹಾಗೂ ತನ್ನ ನೇತೃತ್ವದ ಸರ್ಕಾರದ ವಿರುದ್ಧ ಆರೋಪಗಳಿದ್ದರೆ, ಕಳೆದ ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಯಾಕೆ ಸುಮ್ಮನಿತ್ತು? ಅದಕ್ಕೂ ಮೊದಲು 5 ವರ್ಷಗಳ ಕಾಲ ವಿರೋಧ ಪಕ್ಷ್ದದಲ್ಲಿದ್ದ ಬಿಜೆಪಿ ನಾಯಕರು ಕಳ್ಳೆಪುರಿ ತಿಂತಿದ್ರಾ? ಅವರ ಬಾಯಲ್ಲಿ ಕಡುಬು ಸಿಕ್ಹಾಕಿಕೊಂಡಿತ್ತಾ? ಎಂದು ಸಿದ್ದರಾಮಯ್ಯ (Siddaramaiah) ಬುಧವಾರ ಬೆಂಗಳೂರಲ್ಲಿ ಕೇಳಿದರು. ತಾನು ಮುಖ್ಯಮಂತ್ರಿಯಾಗಿದ್ದಾಗ ಎಂಟು ಪ್ರಕರಣಗಳನ್ನು ಸಿಬಿಐ ತನಿಖೆಗೆ (CBI investigation) ಒಪ್ಪಿಸಿದ್ದೆ ಎಂದು ಹೇಳಿದ ಅವರು ಬಿಜೆಪಿ ಸರ್ಕಾರ (BJP government) ಒಂದಾದರೂ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ ನೀಡಿದೆಯಾ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.