ಹೆಲಿಕಾಪ್ಟರ್​ನಲ್ಲಿ ಕೊಪ್ಪಳಕ್ಕೆ ಬಂದ ಸಿದ್ದರಾಮಯ್ಯ ನೋಡಲು ಹೆಲಿಪ್ಯಾಡ್​ಗೆ ನುಗ್ಗಿದ ಜನ! ವಿಡಿಯೋ ಇಲ್ಲಿದೆ

Rakesh Nayak Manchi

Updated on: Apr 15, 2023 | 6:58 PM

ಕಾಂಗ್ರೆಸ್ ಮಾಸ್ ಲೀಡರ್ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಮೂಲಕ ಕೊಪ್ಪಳ ಜಿಲ್ಲೆಯ ಕಾರಟಗಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರನ್ನು ನೋಡಲು ಜನರು ಮುಗಿಬಿದ್ದರು.

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊಪ್ಪಳ ಜಿಲ್ಲೆಯ ಕಾರಟಗಿ ಕ್ಷೇತ್ರಕ್ಕೆ ಆಗಮಿಸಿದರು. ಕಾಂಗ್ರೆಸ್ ಮಾಸ್ ಲೀಡರ್ ಆಗಿರುವ ಸಿದ್ದರಾಮಯ್ಯ ಹೆಲಿಕಾಪ್ಟರ್​​ ಮೂಲಕ ಆಗಮಿಸಿದ್ದು, ಇವರನ್ನು ನೋಡಲು ಅಭಿಮಾನಿಗಳು ಏಕಾಏಕಿ ಹೆಲಿಪ್ಯಾಡ್​ಗೆ ನುಗ್ಗಿದ್ದಾರೆ. ಒಂದೆಡೆ ಹೆಲಿಕ್ಯಾಪ್ಟರ್ ಆನ್ ಆಗಿದ್ದರೂ ನುಗ್ಗಿದ ಜನರನ್ನು ಕಂಡು ಹೆಲಿಕಾಪ್ಟರ್​ ಪೈಲಟ್ ಆತಂಕಗೊಂಡರೆ, ಇನ್ನೊಂದೆಡೆ, ಹೆಲಿಪ್ಯಾಡ್​ಗೆ ನುಗ್ಗಿದವರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟರು. ಕೊನೆಗೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸುವಂತಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಮಿಸ್: ಹೇಳದೆ ಕೇಳದೆ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್

ಮತ್ತಷ್ಟು ವಿಡಿಯೋ ಸ್ಟೋರಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 15, 2023 06:58 PM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.