AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಷಾಢ ಶುಕ್ರವಾರಕ್ಕೆ ದಿನಗಣನೆ: ಚಾಮುಂಡಿ ಬೆಟ್ಟಕ್ಕೆ ಬರುವ ವಿಐಪಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ, ಸಮಯ ನಿಗದಿ

ಆಷಾಢ ಶುಕ್ರವಾರಕ್ಕೆ ದಿನಗಣನೆ: ಚಾಮುಂಡಿ ಬೆಟ್ಟಕ್ಕೆ ಬರುವ ವಿಐಪಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ, ಸಮಯ ನಿಗದಿ

ರಾಮ್​, ಮೈಸೂರು
| Edited By: |

Updated on: Jul 15, 2026 | 2:27 PM

Share

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಳೆಯಿಂದ ಆರಂಭವಾಗುವ ಆಷಾಢ ಶುಕ್ರವಾರದ ಪೂಜೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ವಿಐಪಿ ದರ್ಶನಕ್ಕೆ ಬೆಳಗ್ಗೆ 5:30ರಿಂದ 9:30ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಶಿಫಾರಸ್ಸು ಪತ್ರ ತಂದವರಿಗೆ ವಾಹನ ಪ್ರವೇಶವಿಲ್ಲ. ಸಾಮಾನ್ಯ ಭಕ್ತರಿಗೆ ಸುಗಮ ದರ್ಶನಕ್ಕೆ ಆದ್ಯತೆ ನೀಡಲಾಗಿದೆ. 300 ರೂಪಾಯಿ ವಿಶೇಷ ಟಿಕೆಟ್ ದರ್ಶನವನ್ನು ಈ ಬಾರಿ ರದ್ದುಪಡಿಸಲಾಗಿದೆ ಎಂದು ಸಚಿವ ಡಾ. ಯತೀಂದ್ರ ತಿಳಿಸಿದ್ದಾರೆ.

ಮೈಸೂರು, ಜುಲೈ 15: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಶುಕ್ರವಾರದ ಪೂಜೆ ಆರಂಭವಾಗಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು (ಬುಧವಾರ) ಬೆಟ್ಟಕ್ಕೆ ಭೇಟಿ ನೀಡಿ ಪೂರ್ವಭಾವಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಅನುಷ್ಠಾನವನ್ನು ಪರಿಶೀಲಿಸಿದರು. ವಿಐಪಿ ದರ್ಶನಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಬೆಳಗ್ಗೆ 5:30ರಿಂದ 9:30ರವರೆಗೆ ಮಾತ್ರ ವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಶಿಫಾರಸ್ಸು ಪತ್ರ ತಂದವರಿಗೆ ಕೂಡ ಬೆಟ್ಟಕ್ಕೆ ವಾಹನ ಪ್ರವೇಶವನ್ನು ನಿಷೇಧಿಸಲಾಗಿದೆ. ಎಂಎಲ್‌ಎಗಳು, ನ್ಯಾಯಾಧೀಶರು, ಸಚಿವರು ಹಾಗೂ ಅವರ ಕುಟುಂಬಸ್ಥರಿಗೆ ಮಾತ್ರ ಬೆಟ್ಟದ ಮೇಲೆ ವಾಹನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಶಿಫಾರಸ್ಸು ಪತ್ರಗಳೊಂದಿಗೆ ಬರುವವರು ಲಲಿತ ಮಹಲ್ ಬಳಿ ವಾಹನ ನಿಲ್ಲಿಸಿ, ಅಲ್ಲಿಂದ ಬಸ್‌ನಲ್ಲಿ ಬೆಟ್ಟಕ್ಕೆ ಬರಬೇಕಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಬಾರಿ 300 ರೂಪಾಯಿ ವಿಶೇಷ ದರ್ಶನ ಟಿಕೆಟ್ ಅನ್ನು ರದ್ದುಪಡಿಸಲಾಗಿದೆ. ಸಾಮಾನ್ಯ ಭಕ್ತರಿಗೆ ಸರಳವಾಗಿ ಮತ್ತು ಸುಗಮವಾಗಿ ದರ್ಶನ ಸಿಗುವುದಕ್ಕೆ ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಮೊದಲ ವಾರದ ಅನುಭವದ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಅಗತ್ಯ ಬದಲಾವಣೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us