ಸದಾನಂದಗೌಡರ ಮನೆಯಲ್ಲಿ ಅಶೋಕ, ಬೊಮ್ಮಾಯಿ, ಅಶ್ವಥ್ ಮತ್ತು ಸಿಟಿ ರವಿ ಮೀಟಿಂಗ್!

ಅರುಣ್​ ಕುಮಾರ್​ ಬೆಳ್ಳಿ

Updated on: Jan 22, 2025 | 9:02 PM

ರಾಜ್ಯ ಬಿಜೆಪಿಯಲ್ಲಿ ಒಳಜಗಳಗಳು ಜೋರಾಗಿ ನಡೆಯುತ್ತಿವೆ, ಇವತ್ತು ಮಾಜಿ ಸಚಿವ ಬಿ ಶ್ರೀರಾಮುಲು ಮತ್ತು ಅವರ ಖಾಸಾ ಗೆಳೆಯ ಗಾಲಿ ಜನಾರ್ಧನರೆಡ್ಡಿ ನಡುವೆ ಕಿತ್ತಾಟ ಶುರುವಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿವೈ ವಿಜಯೇಂದ್ರ ನಡುವಿನ ಜಗಳ ಬೇರೆ ಗ್ರಹದವರಿಗೂ ಗೊತ್ತಾಗಿದೆ. ಕೆಲ ಹಿರಿಯ ಬಿಜೆಪಿ ನಾಯಕರೂ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರೋದು ಗೊತ್ತಾಗುತ್ತಿದೆ.

ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಏನು ನಡೆಯುತ್ತಿದೆ ಅಂತ ಗೊತ್ತಾಗುತ್ತಿಲ್ಲ ಮಾರಾಯ್ರೇ. ನಿನ್ನೆ ಒಂದರ ನಂತರ ಮತ್ತೊಂದರಂತೆ ಮೂರು ಮೀಟಿಂಗ್ ಗಳು. ಸಭೆಗಳ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಆರ್ ಅಶೋಕ ಎಂದಿನಂತಿರದೆ ಮುಖ ಗಂಟಿಕ್ಕಿಕೊಂಡಿದ್ದರು. ಇವತ್ತು ಅವರು ಸೇರಿದಂತೆ ಕೆಲ ಪ್ರಮುಖ ನಾಯಕರು ಹಿರಿಯ ಬಿಜೆಪಿ ನಾಯಕ ಡಿವಿ ಸದಾನಂದಗೌಡ ಮನೆಯಲ್ಲಿ ಸಭೆ ಸೇರಿದ್ದಾರೆ. ಅಶೋಕ ನಂತರ ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ, ಪರಿಷತ್ ಸದಸ್ಯ ಸಿಟಿ ರವಿ ಅವರು ಸದಾನಂದಗೌಡರ ಮನೆಗೆ ಆಗಮಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ರಾಜ್ಯಾಧ್ಯಕ್ಷನ ಚುನಾವಣೆ ಬಗ್ಗೆ ಚರ್ಚೆ ಆಗಿಲ್ಲ: ಆರ್ ಅಶೋಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.