ನಮ್ಮ ಅರೋಪಗಳಿಗೆ ಸಾಕ್ಷಿ ಕೇಳುತ್ತಿದ್ದ ಅಶ್ವಥ್ ನಾರಾಯಣ ತಾವು ಮಾಡುತ್ತಿರುವ ಆಪಾದನೆಗಳಿಗೆ ಸಾಕ್ಷಿ ಒದಗಿಸುತ್ತಾರೆಯೇ? ಎಂಬಿ ಪಾಟೀಲ್, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Aug 11, 2023 | 5:26 PM

ವಿರೋಧ ಪಕ್ಷದ ನಾಯಕನಾಗಲು ಯೋಗ್ಯರಿರುವ ಆರ್ ಅಶೋಕ, ಬಸವರಾಜ ಬೊಮ್ಮಾಯಿ, ಮತ್ತು ತಮ್ಮ ಜಿಲ್ಲೆಯವರೇ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲಾದವರೆಲ್ಲ ತನ್ನ ಆತ್ಮೀಯರೇ ಎಂದು ಪಾಟೀಲ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಎಂಬಿ ಪಾಟೀಲ್ (MB Patil), ಗುತ್ತಿಗೆ ದಾರರ ಆರೋಪಗಲ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ (DK Shivakumar) ರಾಜೀನಾಮೆ ನೀಡಬೇಕು ಎಂದಿರುವ ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರನ್ನು ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಅಂತ ಹೇಳಿದಾಗ ಅಶ್ವಥ್ ನಾರಾಯಣ ಸಾಕ್ಷಿ ಕೊಡಿ ಸಾಕ್ಷಿ ಕೊಡಿ ಅನ್ನುತ್ತಿದ್ದರು, ಈಗ ಅವರು ಮಾಡುತ್ತಿರುವ ಅರೋಪಗಳಿಗೆ ಸಾಕ್ಷಿ ಇದೆಯೇ ಅಂತ ಪಾಟೀಲ್ ಕೇಳಿದರು. ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಅಸಮರ್ಥರಾಗಿರುವ ಬಿಜೆಪಿ ನಾಯಕರು ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಹೀಗೇ ವೃಥಾ ಅರೋಪ ಮಾಡುತ್ತಿದ್ದಾರೆ ಎಂದು ಪಾಟೀಲ್ ಹೇಳಿದರು. ಅಶ್ವಥ್ ನಾರಾಯಣರಿಗೆ ವಿರೋಧ ಪಕ್ಷದ ನಾಯಕನಾಗುವಂತೆ ಸವಾಲೆಸೆದ ಪಾಡೀಲ್, ಅದಕ್ಕೆ ಯೋಗ್ಯರಿರುವ ಆರ್ ಅಶೋಕ, ಬಸವರಾಜ ಬೊಮ್ಮಾಯಿ, ಮತ್ತು ತಮ್ಮ ಜಿಲ್ಲೆಯವರೇ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲಾದವರೆಲ್ಲ ತನಗೆ ಆತ್ಮೀಯರೇ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.