ಫಿನಾಲೆ ಸಮೀಪಿಸುತ್ತಿದ್ದಂತೆ ಶಾಂತಮೂರ್ತಿಯಾದ ಅಶ್ವಿನಿ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

Updated on: Jan 07, 2026 | 8:27 AM

ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸದಾ ಕಿತ್ತಾಟ ಮಾಡುತ್ತಲೇ ಕಾಣಿಸಿಕೊಳ್ಳುತ್ತಾರೆ. ಈಗ ಅವರು ಶಾಂತಮೂರ್ತಿಯಾಗಿದ್ದಾರೆ. ಇದರ ಹಿಂದೆ ಇರುವ ಕಾರಣ ಏನು ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಫಿನಾಲೆ ಬಂದಿದ್ದರಿಂದ ಲೆಕ್ಕಾಚಾರ ಹಾಕಿ ಅವರು ಈ ರೀತಿ ಮಾಡಿರಬಹುದು ಎನ್ನಲಾಗುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಸಮೀಪಿಸುತ್ತಿದ್ದಂತೆ ಅಶ್ವಿನಿ ಗೌಡ ಶಾಂತಮೂರ್ತಿ ಆಗಿದ್ದಾರೆ. ಎದುರಾಳಿಗಳ ಆಟ ಹಾಳು ಮಾಡಲು ಅಶ್ವಿನಿಗೆ ಅವಕಾಶ ನೀಡಲಾಯಿತು. ಈ ವೇಳೆ ಅವರು ಶಾಂತ ರೀತಿಯಲ್ಲಿ ವರ್ತಿಸಿದ್ದಾರೆ. ಇದನ್ನು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ. ‘ಅದು ನನ್ನ ವ್ಯಕ್ತಿತ್ವ ಅಲ್ಲ’ ಎಂದಿದ್ದಾರೆ ಅಶ್ವಿನಿ. ‘ಮುಖವಾಡ ಬದಲಿಸುತ್ತಾರೆ’ ಎಂಬ ಅಭಿಪ್ರಾಯವನ್ನು ರಕ್ಷಿತಾ ಹೊರಹಾಕಿದ್ದಾರೆ. ಫಿನಾಲೆ ಸಮೀಪಿಸಿದ್ದರಿಂದ ಅವರು ಮಾಡಿಕೊಂಡಿರುವ ತಂತ್ರ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More