ಅವಮಾನ ಮಾಡಿದ್ದಕ್ಕೆ ಪ್ರತಿಯಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ

Updated on: Nov 20, 2025 | 8:23 AM

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಅಶ್ವಿನಿ ಗೌಡ ಅವರು ಈಗ ಹೊಸ ಡ್ರಾಮಾ ಆರಂಭಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಅಶ್ವಿನಿ ಗೌಡ ಅವರು ದೊಡ್ಮನೆಯಲ್ಲಿ ನಡೆದುಕೊಂಡಿದ್ದನ್ನು ಅನೇಕರು ಖಂಡಿಸಿದ್ದಾರೆ. ಇದನ್ನು ಡ್ರಾಮಾ ಎಂದು ಕರೆದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಅಶ್ವಿನಿ ಗೌಡ ಅವರು ಈ ವಾರ ಸಂಪೂರ್ಣ ಬದಲಾಗಿದ್ದಾರೆ. ಇಷ್ಟು ದಿನ ಗಟ್ಟಿಯಾಗಿ ಹೋರಾಡುತ್ತಿದ್ದ ಅವರು ಈಗ ಕಣ್ಣೀರು ಹಾಕಲು ಆರಂಭಿಸಿದ್ದಾರೆ. ಇದರ ಮಧ್ಯೆ ಅವರು ಉಪವಾಸ ಆರಂಭಿಸಿದ್ದಾರೆ. ಅವರು ಊಟ ಮಾಡುತ್ತಿಲ್ಲ. ‘ತಮಗೆ ಅವಮಾನ ಆಗಿದೆ. ನನಗೆ ನಾನೇ ಸ್ಟ್ಯಾಂಡ್ ತೆಗೆದುಕೊಳ್ಳಬೇಕು’ ಎಂದು ಅಶ್ವಿನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More