ಸುದೀಪ್ ಬುದ್ಧಿವಾದದ ಬಳಿಕವೂ ಮತ್ತೆ ಜಗಳಕ್ಕೆ ಇಳಿದ ಅಶ್ವಿನಿ ಗೌಡ

Updated on: Nov 24, 2025 | 9:38 AM

ಅಶ್ವಿನಿ ಗೌಡ ಅವರು ಸಣ್ಣ ವಿಚಾರಕ್ಕೂ ಸಿಟ್ಟಾಗುತ್ತಾರೆ. ಈ ವಿಷಯದಲ್ಲಿ ಅವರಿಗೆ ಬೇಸರ ಇದೆ. ಆದರೆ, ಅವರು ತಮ್ಮನ್ನು ತಾವು ಬದಲಿಸಿಕೊಳ್ಳುವ ಆಲೋಚನೆಯಲ್ಲಿ ಇದ್ದಂತೆ ಕಾಣಿಸುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಸಿಕ್ಕಿದೆ. ಅವರು ಜಗಳಕ್ಕೆ ಇಳಿದಿದ್ದಾರೆ. ಆ ಪ್ರೋಮೋ ವೈರಲ್ ಆಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರು ಜನಪ್ರಿಯತೆಗಿಂತ ಹೆಚ್ಚಾಗಿ ಕುಖ್ಯಾತಿ ಪಡೆದಿದ್ದೇ ಹೆಚ್ಚು. ಪ್ರತಿ ವಾರ ಒಂದಲ್ಲ ಒಂದು ತಪ್ಪು ಮಾಡಿ ಟೀಕೆಗೆ ಗುರಿಯಾಗುತ್ತಾರೆ. ಕಳೆದ ವಾರ ಅವರು ಸುದೀಪ್ ಕಡೆಯಿಂದ ಪಾಠ ಹೇಳಿಸಿಕೊಳ್ಳಬೇಕಾಯಿತು. ಈಗ ಈ ವಾರ ಮತ್ತೆ ರೋಷದೊಂದಿಗೆ ಆರಂಭಿಸಿದ್ದಾರೆ. ನಾಮಿನೇಟ್ ಮಾಡಿದ ಧ್ರುವಂತ್ ವಿರುದ್ಧ ಅಶ್ವಿನಿ ಸಿಟ್ಟಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More