ಹೆಲ್ಮೆಟ್​ ಜಾಗೃತಿ: ಪುನೀತ್​ ರಾಜ್​ಕುಮಾರ್​ ವಿಡಿಯೋ ನೋಡಿ ಪೊಲೀಸರ ಎದುರು ಅಶ್ವಿನಿ ಭಾವುಕ

‘ಗುಣಮಟ್ಟದ ಹೆಲ್ಮೆಟ್​ ಧರಿಸೋಣ ಪ್ರಾಣ ಉಳಿಸೋಣ’ ಅಭಿಯಾನವನ್ನು ಮಾಡಲಾಗುತ್ತಿದೆ. ಇದರ ಉದ್ಘಾಟನಾ ಸಮಾರಂಭದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಭಾಗಿ ಆಗಿದ್ದರು.

ಹೆಲ್ಮೆಟ್​ ಜಾಗೃತಿ: ಪುನೀತ್​ ರಾಜ್​ಕುಮಾರ್​ ವಿಡಿಯೋ ನೋಡಿ ಪೊಲೀಸರ ಎದುರು ಅಶ್ವಿನಿ ಭಾವುಕ
| Updated By: ಮದನ್​ ಕುಮಾರ್​

Updated on: Mar 16, 2022 | 2:07 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರತಿ ದಿನವೂ ಅಭಿಮಾನಿಗಳು ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಗಳ ಕಾರಣದಿಂದ ಅಪ್ಪು ಫೇಮಸ್​ ಆಗಿದ್ದರು. ಹಾಗಾಗಿ ಅವರು ಎಲ್ಲರಿಗೂ ಮಾದರಿ ವ್ಯಕ್ತಿ. ಹೆಲ್ಮೆಟ್​ ಧರಿಸುವ ಬಗ್ಗೆ ಜಾಗೃತಿ ಸಂದೇಶವನ್ನು ಪುನೀತ್​ ರಾಜ್​ಕುಮಾರ್​ ನೀಡಿದ್ದರು. ಆ ವಿಡಿಯೋವನ್ನು ಇಟ್ಟುಕೊಂಡು ಬೆಂಗಳೂರು ನಗರ ಸಂಚಾರ ಪೊಲೀಸರು ಜನರಿಗೆ ಅರಿವು ಮೂಡಿಸುತ್ತಿದ್ದಾರೆ. ‘ಗುಣಮಟ್ಟದ ಹೆಲ್ಮೆಟ್ ಧರಿಸೋಣ ಪ್ರಾಣ ಉಳಿಸೋಣ’ ಅಭಿಯಾನವನ್ನು ಮಾಡಲಾಗುತ್ತಿದೆ. ಇದರ ಉದ್ಘಾಟನಾ ಸಮಾರಂಭದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರು ಭಾಗಿ ಆಗಿದ್ದರು. ಈ ವೇಳೆ ‘ಗೊಂಬೆ ಹೇಳುತೈತೆ..’ ಹಾಡಿನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹೆಲ್ಮೆಟ್​ ಜಾಗೃತಿ ಮತ್ತು ಸಂಚಾರ ನಿಯಮಗಳ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಈ ಹಿಂದೆ ಮಾತನಾಡಿದ್ದ ವಿಡಿಯೋವನ್ನು (Puneeth Rajkumar Video) ಬಿತ್ತರ ಮಾಡಲಾಯಿತು. ಅದನ್ನು ನೋಡಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಭಾವುಕರಾದರು.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಜನ್ಮದಿನದ ಪ್ರಯುಕ್ತ 202 ಕಿ.ಮೀ. ಸೈಕಲ್​ ಜಾಥಾ ಹೊರಟ ಅಪ್ಪು ಫ್ಯಾನ್ಸ್​

‘ಕನ್ನಡದ ಕೋಟ್ಯಧಿಪತಿ’ಯಿಂದ ಪುನೀತ್​ಗೆ ಸಿಕ್ಕ ಸಂಭಾವನೆ ಎಷ್ಟು ಕೋಟಿ? ಆ ದುಡ್ಡಲ್ಲಿ ಆಗ್ತಿದೆ ಪುಣ್ಯದ ಕೆಲಸ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು