ದೇವರ ಪ್ರತಿಷ್ಠಾಪನೆಗೆ ಸಿಂಪಲ್ ಆಗಿ ಬಂದ ಅಶ್ವಿನಿ ಪುನೀತ್​ ರಾಜ್​ಕುಮಾರ್

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಸಿನಿಮಾ ನಿರ್ಮಾಣಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲೂ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೆಜ್ಜಾಲದ ಮಂಚನಾಯಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ದೇವರ ಪ್ರತಿಷ್ಠಾಪನೆಗೆ ಸಿಂಪಲ್ ಆಗಿ ಬಂದ ಅಶ್ವಿನಿ ಪುನೀತ್​ ರಾಜ್​ಕುಮಾರ್
| Updated By: ರಾಜೇಶ್ ದುಗ್ಗುಮನೆ

Updated on: Feb 22, 2024 | 6:10 PM

ನಿರ್ಮಾಪಕಿ ಹಾಗೂ ಪುನೀತ್ ರಾಜ್​ಕುಮಾರ್ (Puneeth Rajkumar) ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಸಿನಿಮಾ ನಿರ್ಮಾಣಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲೂ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೆಜ್ಜಾಲದ ಮಂಚನಾಯಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ವರಪ್ರದ ವೆಂಕಟೇಶ್ವರ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ ಇತ್ತು. ವೆಂಕಟೇಶ್ವರ ಸ್ವಾಮಿ ದೇವರ ದರ್ಶನ ಪಡೆದ ಅವರು ಸನ್ಮಾನ ಸ್ವೀಕರಿಸಿದರು. ಪುನೀತ್ ನಿಧನದ ಬಳಿಕ ಪಿಆರ್​ಕೆ ಸ್ಟುಡಿಯೋಸ್​ನ ಅಶ್ವಿನಿ ಅವರು ಮುನ್ನಡೆಸುತ್ತಿದ್ದಾರೆ. ಹೊಸಬರಿಗೆ ಅವರು ಅವಕಾಶ ನೀಡುತ್ತಿದ್ದಾರೆ. ಅವರ ನಿರ್ಮಾಣದ ‘ಆಚಾರ್ ಆ್ಯಂಡ್ ಕೋ’ ಮೆಚ್ಚುಗೆ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us