AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಮದನ್​ ಕುಮಾರ್​
|

Updated on: Mar 20, 2026 | 8:07 PM

Share

ಬೆಂಗಳೂರಿನ ಸ್ಯಾಂಕಿ ಕೆರೆ ಮುಂಭಾಗದಲ್ಲಿ ಪುನೀತ್ ರಾಜ್​ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ ಆಗಿದೆ. 800 ಕೆಜಿ ತೂಕದ ಪ್ರತಿಮೆಯನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅನಾವರಣ ಮಾಡಿದರು. ಈ ವೇಳೆ ಶಾಸಕ ಡಾ. ಅಶ್ವತ್ಥ್​​ ನಾರಾಯಣ, ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಭಾಗಿ ಆಗಿದ್ದರು.

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್. ‘ನಮ್ಮ‌ನೆಚ್ಚಿನ ನಟ ಪುನೀತ್ ರಾಜ್‍ಕುಮಾರ್ (Puneeth Rajkumar). ಅವರ ಮೆಚ್ಚಿನ ಸ್ಥಳ ಸದಾಶಿವ ನಗರ. ಇಲ್ಲಿ ಅವರ ಪ್ರತಿಮೆ ಆಗಬೇಕು ಎಂಬ ಬೇಡಿಕೆ ಇತ್ತು. ಇದಕ್ಕೆ ಸ್ಫೂರ್ತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಎಲ್ಲರ ಸಲಹೆ ಪಡೆದು ಪ್ರತಿಮೆ ಮಾಡಲಾಗಿದೆ. ಯುಗಾದಿ ಹಬ್ಬದ ಸಂಧರ್ಭದಲ್ಲಿ ಉದ್ಘಾಟನೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ, ಅಭಿಮಾನಿಗಳಿಗೆ, ಪುನೀತ್ ಕುಟುಂಬಕ್ಕೆ ಧನ್ಯವಾದಗಳು’ ಎಂದು ಅಶ್ವತ್ಥ್​​ ನಾರಾಯಣ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us