AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆ ಹೇಯಕರ ಮತ್ತು ಅತ್ಯಂತ ಖಂಡನೀಯ: ಡಾ ಸಿಎನ್ ಮಂಜುನಾಥ್

ನಮ್ಮ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆ ಹೇಯಕರ ಮತ್ತು ಅತ್ಯಂತ ಖಂಡನೀಯ: ಡಾ ಸಿಎನ್ ಮಂಜುನಾಥ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 11, 2024 | 6:29 PM

Share

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ ಐಆರ್ ದಾಖಲಾಗಿದೆ ಮತ್ತು ತಾವು ಕೂಡ ಡಿಐಜಿ ಜೊತೆ ಮಾತಾಡಿರುವುದಾಗಿ ಡಾ ಮಂಜುನಾಥ್ ಹೇಳಿದರು. ಇಂಥ ಘಟನೆಗಳಿಂದ ಮತದಾರರು ಭಯಭೀತರಾಗೋದು ಸ್ವಾಭಾವಿಕ, ಆದರೆ ತಮ್ಮ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು, ಆತಂಕಕ್ಕೊಳಗಾಗಬಾರದು, ಎರಡೂ ಪಕ್ಷಗಳ ಹಿರಿಯ ನಾಯಕರು ಅವರ ಜೊತೆಗಿದ್ದಾರೆ ಎಂದು ಅವರು ಹೇಳಿದರು.

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಕ್ತಸಿಕ್ತ ರಾಜಕಾರಣಕ್ಕೆ ಅಣಿಯಾಗುತ್ತಿದೆಯೇ? ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ (Kunigal Assembly segment) ಮೂವರು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದ್ದು ಹಲ್ಲೆಗೊಳಗಾದವರು ರಕ್ತದ ಕಲೆಗಳಿರುವ ಬಟ್ಟೆಗಳೊಂದಿಗೆ ತಮ್ಮ ಇಮೇಜುಗಳನ್ನು ಸೋಶಿಯಲ್ ಮೀಡಿಯದಲ್ಲಿ ಶೇರ್ ಮಾಡಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ಟಿವಿ9 ರಾಮನಗರ ವರದಿಗಾರ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ (Dr CN Manjunath) ಅವರನ್ನು ಮಾತಾಡಿಸಿದಾಗ, ಮೊದಲು ಇದ್ಯಾವುದನ್ನು ನೋಡಿರದ ಡಾಕ್ಟರ್ ಬೇಸರ, ಅಕ್ರೋಶ ಮತ್ತು ಹೇವರಿಕೆಯನ್ನು ವ್ಯಕ್ತಪಡಿಸಿದರು. ಇದು ಸಂಸ್ಕೃತಿ ಅಲ್ಲ ಸಂಸ್ಕಾರವೂ ಅಲ್ಲ, ಚುನಾವಣೆಯಲ್ಲಿ ಸ್ಪರ್ಧೆ ಆರೋಗ್ಯಕರವಾಗಿರಬೇಕು, ಈಗ ನಡೆದಿರೋದು ಪ್ರಜಾಪ್ರಭುತ್ವ (democracy) ವ್ಯವಸ್ಥೆಗೆ ಅವಮಾನ, ಹಲ್ಲೆ ಮಾಡಿರುವ ಘಟನೆ ಅತ್ಯಂತ ಖಂಡನೀಯ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ ಐಆರ್ ದಾಖಲಾಗಿದೆ ಮತ್ತು ತಾವು ಕೂಡ ಡಿಐಜಿ ಜೊತೆ ಮಾತಾಡಿರುವುದಾಗಿ ಡಾ ಮಂಜುನಾಥ್ ಹೇಳಿದರು. ಇಂಥ ಘಟನೆಗಳಿಂದ ಮತದಾರರು ಭಯಭೀತರಾಗೋದು ಸ್ವಾಭಾವಿಕ, ಆದರೆ ತಮ್ಮ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು, ಆತಂಕಕ್ಕೊಳಗಾಗಬಾರದು, ಎರಡೂ ಪಕ್ಷಗಳ ಹಿರಿಯ ನಾಯಕರು ಅವರ ಜೊತೆಗಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿಕೆ ಸಹೋದರರು ಮಾಡುವ ಟೀಕೆಗಳಿಗೆ ಮತದಾರರೇ ಉತ್ತರ ನೀಡಲಿದ್ದಾರೆ: ಡಾ ಸಿಎನ್ ಮಂಜುನಾಥ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.