AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಾಷ್ಟಮಿ: ಉಡುಪಿ ಕೃಷ್ಣಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್

ಕೃಷ್ಣ ಜನ್ಮಾಷ್ಟಮಿ: ಉಡುಪಿ ಕೃಷ್ಣಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Sep 07, 2023 | 11:00 AM

ಜನ್ಮಾಷ್ಟಮಿಯ ಪವಿತ್ರವಾದ ದಿನವಾದ ಇಂದು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದಿದ್ದು ಧನ್ಯತೆಯ ಭಾವ ಮೂಡಿಸಿದೆ. ನಾಡಿನ ಜನರೆಲ್ಲ ಪ್ರೀತಿ-ವಿಶ್ವಾಸಗಳೊಂದಿಗೆ ನೆಮ್ಮದಿಯಿಂದ ಬದುಕುವ ಶಕ್ತಿಯನ್ನು ಕೃಷ್ಣ ಪರಮಾತ್ಮ ದಯಪಾಲಿಸಲಿ, ಕರ್ನಾಟಕ ಹೆಚ್ಚೆಚ್ಚು ಅಭಿವೃದ್ಧಿ ಹೊಂದಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಪೂರಕವಾಗಲಿ ಎಂದು ಕೃಷ್ಣನನ್ನು ಪ್ರಾರ್ಥಿಸಿದ್ದಾಗಿ ಹೇಳಿದರು.

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ (Assembly speaker UT Khader) ನಗರದ ವಿಖ್ಯಾತ ಕೃಷ್ಣ ಮಠಕ್ಕೆ (Udupi krishna Mutt) ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ನಂತರ ಟಿವಿ9 ಕನ್ನಡ ವಾಹಿನಿಯ ಉಡುಪಿ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ನಾಡಿನ ಜನತೆಗೆ ಜನ್ಮಾಷ್ಟಮಿಯ ಶುಭಾಷಯಗಳನ್ನು ತಿಳಿಸಿದರು. ಮುಂದುವರಿದು ಮಾತಾಡಿದ ಖಾದರ್ ಜನ್ಮಾಷ್ಟಮಿಯ ಪವಿತ್ರವಾದ ದಿನವಾದ ಇಂದು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದಿದ್ದು ಧನ್ಯತೆಯ ಭಾವ ಮೂಡಿಸಿದೆ. ನಾಡಿನ ಜನರೆಲ್ಲ ಪ್ರೀತಿ-ವಿಶ್ವಾಸಗಳೊಂದಿಗೆ ನೆಮ್ಮದಿಯಿಂದ ಬದುಕುವ ಶಕ್ತಿಯನ್ನು ಕೃಷ್ಣ ಪರಮಾತ್ಮ ದಯಪಾಲಿಸಿಸಲಿ, ಕರ್ನಾಟಕ (Karnataka) ಹೆಚ್ಚೆಚ್ಚು ಅಭಿವೃದ್ಧಿ ಹೊಂದಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಪೂರಕವಾಗಲಿ ಎಂದು ಕೃಷ್ಣನನ್ನು ಪ್ರಾರ್ಥಿಸಿದ್ದಾಗಿ ಹೇಳಿದರು. ಖಾದರ್ ಅವರೊಂದಿಗೆ ಕೆಲ ಸ್ಥಳೀಯ ನಾಯಕರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 07, 2023 10:58 AM