Karnataka Bandh; ಶುಕ್ರವಾರದ ಕರ್ನಾಟಕ ಬಂದ್​ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಖಾಸಗಿ ಶಾಲೆಗಳ ಒಕ್ಕೂಟ ಅಧ್ಯಕ್ಷ

Updated on: Sep 28, 2023 | 1:22 PM

ಈ ವಾರದಲ್ಲಿ ಎರಡೆರಡು ಬಂದ್, ಸರ್ಕಾರಿ ರಜೆ, ಶನಿವಾರ ಮತ್ತು ರವಿವಾರದ ರಜೆಗಳ ಬಳಿಕ ಗಾಂಧಿ ಜಯಂತಿ-ಹೀಗೆ ವಾರವಿಡೀ ಸಾಲು ಸಾಲು ರಜೆಗಳು ಬಂದಿರುವುದರ ಜೊತೆಗೆ ಪರೀಕ್ಷೆಗಳು ಸಹ ನಡೆಯುತ್ತಿರುವುದರಿಂದ ಮಕ್ಕಳ ಓದಿನ ಮೇಲೆ ವ್ಯತಿತಿಕ್ತ ಪರಿಣಾಮ ಬೀರುತ್ತಿದೆ; ಹಾಗಾಗಿ, ಆಯಾ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ತಮ್ಮ ಏರಿಯಾಗಳಲ್ಲಿನ ಸ್ಥಿತಿಗತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಶಶಿಕುಮಾರ್ ಹೇಳಿದರು.

ಬೆಂಗಳೂರು: ಕಾವೇರಿ ನದಿ ನೀರಿನ ವಿವಾದಕ್ಕೆ (Cauvery water dispute) ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಗಳಿ ನಾಳೆ ಅಖಂಡ ಕರ್ನಾಟಕ ಬಂದ್ ಆಚರಿಸಲು ನೀಡಿರುವ ಕರೆಗೆ ನೈತಿಕ ಬೆಂಬಲ (moral support) ನೀಡುವುದಾಗಿ ನಗರ ಖಾಸಗಿ ಶಾಲೆಗಳ ಒಕ್ಕೂಟದ (ಕಾಮ್ಸ್) ಅಧ್ಯಕ್ಷ ಶಶಿಕುಮಾರ್ (Shashikumar) ಹೇಳಿದರು. ಬೆಂಗಳೂರಲ್ಲಿಂದು ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ನೀಡಿದ ಅವರು ಈ ವಾರದಲ್ಲಿ ಎರಡೆರಡು ಬಂದ್, ಸರ್ಕಾರಿ ರಜೆ, ಶನಿವಾರ ಮತ್ತು ರವಿವಾರದ ರಜೆಗಳ ಬಳಿಕ ಗಾಂಧಿ ಜಯಂತಿ-ಹೀಗೆ ವಾರವಿಡೀ ಸಾಲು ಸಾಲು ರಜೆಗಳು ಬಂದಿರುವುದರ ಜೊತೆಗೆ ಪರೀಕ್ಷೆಗಳು ಸಹ ನಡೆಯುತ್ತಿರುವುದರಿಂದ ಮಕ್ಕಳ ಓದಿನ ಮೇಲೆ ವ್ಯತಿತಿಕ್ತ ಪರಿಣಾಮ ಬೀರುತ್ತಿದೆ; ಹಾಗಾಗಿ, ಆಯಾ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ತಮ್ಮ ಏರಿಯಾಗಳಲ್ಲಿನ ಸ್ಥಿತಿಗತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಶಶಿಕುಮಾರ್ ಹೇಳಿದರು. ನಾಳೆ ಸರ್ಕಾರೀ ಶಾಲಾ ಕಾಲೇಜಿಗಳು ಓಪನ್ ಇರುತ್ತವೆಯೇ ಇಲ್ಲವೇ ಅಂತ ಇವತ್ತೇ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಬೇಕೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More