Video: ಭಾರತಕ್ಕೆ ತನ್ನ ರಕ್ಷಿಸಿಕೊಳ್ಳುವ, ಅಪರಾಧಿಗಳ ಶಿಕ್ಷಿಸುವ ಹಕ್ಕಿದೆ: ಚೀನಾದಲ್ಲಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಾಜನಾಥ್ ಸಿಂಗ್

Updated on: Jun 26, 2025 | 10:56 AM

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಸ್​ಸಿಒ(ಶಾಂಘೈ ಸಹಕಾರ ಸಂಸ್ಥೆ) ಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳಿದ್ದಾರೆ. ಅಲ್ಲಿ ಪಾಕ್ ರಕ್ಷಣಾ ಸಚಿವರ ಎದುರೇ ಭಯೋತ್ಪಾದನೆ ವಿರುದ್ಧ ಗುಡುಗಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಾಯಕರು ಒಂದೇ ವೇದಿಕೆಯಲ್ಲಿ ಹಾಜರಿರುವುದು ಇದೇ ಮೊದಲು. ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಪಾಕಿಸ್ತಾನದ ವಿರುದ್ಧ ತೀಕ್ಷ್ಣವಾದ ದಾಳಿ ನಡೆಸಿದರು.

ಶಾಂಘೈ, ಜೂನ್ 26: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಸ್​ಸಿಒ(ಶಾಂಘೈ ಸಹಕಾರ ಸಂಸ್ಥೆ) ಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳಿದ್ದಾರೆ. ಅಲ್ಲಿ ಪಾಕ್ ರಕ್ಷಣಾ ಸಚಿವರ ಎದುರೇ ಭಯೋತ್ಪಾದನೆ ವಿರುದ್ಧ ಗುಡುಗಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಾಯಕರು ಒಂದೇ ವೇದಿಕೆಯಲ್ಲಿ ಹಾಜರಿರುವುದು ಇದೇ ಮೊದಲು. ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಪಾಕಿಸ್ತಾನದ ವಿರುದ್ಧ ತೀಕ್ಷ್ಣವಾದ ದಾಳಿ ನಡೆಸಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಮತ್ತು ಪಹಲ್ಗಾಮ್ ದಾಳಿಯ ಬಗ್ಗೆ ಬಹಿರಂಗವಾಗಿ ಪ್ರಸ್ತಾಪಿಸಿದರು. ಭಾರತಕ್ಕೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಮತ್ತು ಅಪರಾಧಿಗಳನ್ನು ಶಿಕ್ಷಿಸುವ ಹಕ್ಕಿದೆ ಎಂದು ಅವರು ಹೇಳಿದರು. ಭಯೋತ್ಪಾದನೆಯ ವಿರುದ್ಧ ನಾವು ಕ್ರಮ ಕೈಗೊಳ್ಳುವುದನ್ನು ಮುಂದುವರಿಸುತ್ತೇವೆ ಎಂದು ಅವರು ಪಾಕಿಸ್ತಾನದ ರಕ್ಷಣಾ ಸಚಿವರಿಗೆ ಸ್ಪಷ್ಟವಾಗಿ ಹೇಳಿದರು. ಅಮಾಯಕರ ರಕ್ತ ಚೆಲ್ಲುವವರನ್ನು ನಾವು ಬಿಡುವುದಿಲ್ಲ ಎಂದು ಹೇಳಿದರು.

ಕೆಲವು ದೇಶಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ನೀತಿಯಾಗಿ ಬಳಸುತ್ತವೆ. ಅವರು ಭಯೋತ್ಪಾದಕರಿಗೆ ವಾಸಿಸಲು ಸ್ಥಳ ನೀಡುತ್ತಾರೆ. ಅಂತಹ ದ್ವಿಮುಖ ನೀತಿಗಳಿಗೆ ಯಾವುದೇ ಸ್ಥಳವಿಲ್ಲ. ರಾಜನಾಥ್ ಸಿಂಗ್ ಅವರು, SCO ಅಂತಹ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಹೇಳಿದರು.

ಯಾವುದೇ ಭಯೋತ್ಪಾದನಾ ಕೃತ್ಯವು ಅಪರಾಧ ಮತ್ತು ಸಮರ್ಥನೀಯವಲ್ಲ, ಅವರ ಉದ್ದೇಶ ಏನೇ ಇರಲಿ. SCO ಸದಸ್ಯರು ಭಯೋತ್ಪಾದನೆಯನ್ನು ಸ್ಪಷ್ಟವಾಗಿ ಖಂಡಿಸಬೇಕು ಎಂದರು. ಕಿಂಗ್ಡಾವೊದಲ್ಲಿ ಸಭೆಗೂ ಮುನ್ನ, ಎಲ್ಲಾ ರಕ್ಷಣಾ ಸಚಿವರೊಂದಿಗೆ ಗುಂಪು ಫೋಟೋ ತೆಗೆಸಿಕೊಳ್ಳಲಾಯಿತು, ಇದರಲ್ಲಿ ರಾಜನಾಥ್ ಸಿಂಗ್ ಮತ್ತು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಕೂಡ ಹಾಜರಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jun 26, 2025 10:19 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More