AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಸಿಡಿಸಬೇಕೆಂದಿದ್ದ ಬಾಂಬು ಶಿವಕಾಶಿಯಲ್ಲಿ ತಯಾರಾಗಿರಬಹುದು: ಸುನಿಲ್ ಕುಮಾರ, ಬಿಜೆಪಿ ಶಾಸಕ

ರಾಹುಲ್ ಗಾಂಧಿ ಸಿಡಿಸಬೇಕೆಂದಿದ್ದ ಬಾಂಬು ಶಿವಕಾಶಿಯಲ್ಲಿ ತಯಾರಾಗಿರಬಹುದು: ಸುನಿಲ್ ಕುಮಾರ, ಬಿಜೆಪಿ ಶಾಸಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 07, 2025 | 6:44 PM

Share

ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಅರೋಪಿಸುವವರು ಇಷ್ಟು ಸುಮ್ಮನಿದ್ದಿದ್ದು ಯಾಕೆ? ಚುನಾವಣೆ ಮುಗಿದು ಒಂದೂಕಾಲು ವರ್ಷಗಳ ನಂತರ ಯಾಕೀ ವರಾತ? ಚುನಾವಣೆ ಹತ್ತಿರದಲ್ಲಿದ್ದಾಗ ಮತದಾರರ ಪಟ್ಟಿಯನ್ನು ನೋಡಲಿಲ್ಲ, ಕಾಂಗ್ರೆಸ್ ಗೆದ್ದರೆ ಎಲ್ಲ ಓಕೆ, ಸೋತರೆ ಈವಿಎಂ ಸರಿಯಿಲ್ಲ, ಪಟ್ಟಿ ಸರಿಯಿಲ್ಲ ಎಂಬ ಆರೋಪಗಳು, ಈ ಹಿನ್ನೆಲೆಯಲ್ಲೇ ನಾವು ಒನ್ ನೇಷನ್ ಒನ್ ಎಲೆಕ್ಷನ್ ಬೇಕೆನ್ನುವುದು ಎಂದು ಸುನೀಲ ಕುಮಾರ್ ಹೇಳಿದರು.

ಬೆಂಗಳೂರು, ಆಗಸ್ಟ್ 7: ಅತ್ತ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಲೋಕಸಭಾ ಮತ್ತು ಇತರ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ ಎಂದು ಪತ್ರಿಕಾ ಗೋಷ್ಠಿ ನಡೆಸಿ ವಿವರಗಳನ್ನು ನೀಡಿದರೆ ಇತ್ತ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಸುನೀಲ ಕುಮಾರ, ಸಂಸತ್ತಿನ ವಿರೋಧ ಪಕ್ಷದ ನಾಯಕ ಚುನಾವಣಾ ಆಯೋಗದ ಕಾರ್ಯವಿಧಾನವನ್ನು ಪ್ರಶ್ನಿಸುವುದು ಎಷ್ಟು ಸರಿ ಅಂತ ಕೇಳಿದರು. ಅವರು ಸಿಡಿಸುತ್ತೇನೆ ಎಂದು ಹೇಳಿದ ಅಣುಬಾಂಬ್ ಶಿವಕಾಶಿಯಲ್ಲಿ ತಯಾರಾಗಿದ್ದು ಅಂತ ಕಾಣುತ್ತದೆ, ಅಲ್ಲಿ ತಯಾರಾಗುವ ಪಟಾಕಿಗಳು ಹೇಗಿರುತ್ತವೆ ಅನ್ನೋದನ್ನು ದೀಪಾವಳಿ ಸಂದರ್ಭದಲ್ಲಿ ನೋಡುತ್ತಿರುತ್ತೇವೆ ಅಂತ ಸುನೀಲ ಕುಮಾರ್ ಗೇಲಿ ಮಾಡಿದರು. ಯಾವುದೇ ಮತಕ್ಷೇತ್ರದಲ್ಲಿ ಮತದಾರರರ ಪಟ್ಟಿಗೆ ಹೆಸರುಗಳನ್ನು ಸೇರಿಸಲು ಇಲ್ಲವೇ ಡಿಲೀಟ್ ಮಾಡಲು ಎಲ್ಲ ರಾಜಕೀಯ ಪಕ್ಷಗಳು ಬೂತ್ ಲೆವೆಲ್ ಆಫೀಸರ್ ಗಳನ್ನು ನೇಮಕ ಮಾಡುತ್ತವೆ, ಹಾಗಾದರೆ ಕಾಂಗ್ರೆಸ್ ಪಕ್ಷಕ್ಕೆ ಬಿಎಲ್​ಒ 2ಗಳು ಸಿಕ್ಕೇ ಇಲ್ಲವೇ ಎಂದು ಸುನೀಲ ಕುಮಾರ್ ಪ್ರಶ್ನಿಸಿದರು.

ಇದನ್ನೂ ಓದಿ:  ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನೇ ನಿಭಾಯಿಸಲಾಗುತ್ತಿಲ್ಲ, ಅಧ್ಯಕ್ಷನಾಗುವ ಮಾತು ಎಲ್ಲಿಂದ ಬಂತು? ಸುನೀಲ ಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.