AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಅನುಮತಿಯಿಲ್ಲದೆ 6 ತಿಂಗಳ ಹಿಂದೆ ಮಾಡಿದ್ದ ಸಮಾಧಿ ಶಿಫ್ಟ್​​ ಮಾಡಲು ಯತ್ನ! ಹೀಗ್ಯಾಕೆ? ಈಗ್ಯಾಕೆ?

ಅಧಿಕಾರಿಗಳ ಅನುಮತಿಯಿಲ್ಲದೆ 6 ತಿಂಗಳ ಹಿಂದೆ ಮಾಡಿದ್ದ ಸಮಾಧಿ ಶಿಫ್ಟ್​​ ಮಾಡಲು ಯತ್ನ! ಹೀಗ್ಯಾಕೆ? ಈಗ್ಯಾಕೆ?

ನವೀನ್ ಕುಮಾರ್ ಟಿ
| Edited By: |

Updated on: Mar 07, 2024 | 1:18 PM

Share

ಜೊತೆಗೆ ಮೃತ ವ್ಯಕ್ತಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರದಿದ್ದರೂ ಕ್ರಿಶ್ಚಿಯನ್ ಬಾಕ್ಸ್ ತಂದು ಅದರಲ್ಲಿ ಶಿಫ್ಟ್​ ಮಾಡಲು ಯತ್ನಿಸಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಸಮಾಧಿಯಿಂದ ಮೃತದೇಹವನ್ನ ಶಿಫ್ಟ್​​ ಮಾಡಲು ಅಧಿಕಾರಿಗಳಿಂದ ಅನುಮತಿಯನ್ನೂ ಪಡೆಯದೆ ಸಮಾಧಿ ಅಗೆದಿರುವುದರ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಆರು ತಿಂಗಳ ಹಿಂದೆ ಅಂತ್ಯಕ್ರಿಯೆ ( last rites) ಮಾಡಿ, ಸಮಾಧಿ (grave) ಮಾಡಿದ್ದನ್ನು ಏಕಾಏಕಿ ಈಗ ಅಗೆದು ಮೃತದೇಹವನ್ನ ಬೇರೆಡೆಗೆ ಅಕ್ರಮವಾಗಿ ಶಿಫ್ಟ್​​ ಮಾಡ್ತಿದ್ದಾರೆ ಅಂತ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಯಲಹಂಕ (Yelahanka) ತಾಲೂಕಿನ ನಾಗೇನಹಳ್ಳಿಯಲ್ಲಿ ಆರು ತಿಂಗಳಿಂದೆ ವೆಂಕಟರಾಜು ಎಂಬುವವರು ಸಾವನ್ನಪಿದ್ದು ಆತನನ್ನ ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಿದ್ರಂತೆ. ಆದ್ರೆ ಅಂದಿನಿಂದ ಸುಮ್ಮನಿದ್ದ ಕೆಲವರು ಇದೀಗ ಏಕಾಏಕಿ ಸಮಾಧಿ ಅಗೆಯಲು ಬಂದಿದ್ದು ಅಕ್ರಮವಾಗಿ ಸಮಾಧಿ ಶಿಫ್ಟ್​​ ಮಾಡ್ತಿದ್ದಾರೆ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ಜೊತೆಗೆ ಮೃತ ವ್ಯಕ್ತಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರದಿದ್ದರೂ ಕ್ರಿಶ್ಚಿಯನ್ ಬಾಕ್ಸ್ ತಂದು ಅದರಲ್ಲಿ ಶಿಫ್ಟ್​ ಮಾಡಲು ಯತ್ನಿಸಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಸಮಾಧಿಯಿಂದ ಮೃತದೇಹವನ್ನ ಶಿಫ್ಟ್​​ ಮಾಡಲು ಅಧಿಕಾರಿಗಳಿಂದ ಅನುಮತಿಯನ್ನೂ ಪಡೆಯದೆ ಸಮಾಧಿ ಅಗೆದಿರುವುದರ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಇನ್ನು ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸರಿಗೆ ಮೃತದೇಹದ ಸಂಬಂಧಿಕರು ದೂರು ನೀಡಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More