AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರನನ್ನು ಕಿತ್ತು ಬಿಸಾಕಿ: ಆಡಿಯೋ ವೈಲರ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು

ವಿಜಯೇಂದ್ರನನ್ನು ಕಿತ್ತು ಬಿಸಾಕಿ: ಆಡಿಯೋ ವೈಲರ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: Jun 29, 2026 | 4:34 PM

Share

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಉಚ್ಚಾಟನೆ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸದಾನಂದಗೌಡರು, ಇದು ತಮ್ಮ ವಿರುದ್ಧದ ಪಿತೂರಿ ಎಂದು ಆರೋಪಿಸಿದ್ದು, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಇನ್ನು ಆಡಿಯೋ ವೈರಲ್ ಸಂಬಂಧ ಸದಾನಂದಗೌಡ ಪ್ರತಿಕ್ರಿಯಿಸಲು ನಿರಾಕರಿಸಿದಾದರೂ ಒಂದೆಡೆರು ಮಾತುಗಳನ್ನಾಡಿದ್ದಾರೆ.

ಮುಖ್ಯಾಂಶಗಳು

  • ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕಿತ್ತಾಕಿ ಎನ್ನುವ ಆಡಿಯೋ ವೈರಲ್
  • ಸದಾನಂದಗೌಡ ಕೇಂದ್ರದ ನಾಯಕರೊಬ್ಬರೊಂದಿಗೆ ಮಾತ್ನಾಡಿದ್ದಾರೆ ಎನ್ನಲಾದ ಆಡಿಯೋ
  • ಆಡಿಯೋ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ್ದಂತೆ ಸ್ಪಷ್ಟನೆ ನೀಡಿದ ಸದಾನಂದಗೌಡ

ಬೆಂಗಳೂರು, (ಜೂನ್ 29): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಉಚ್ಚಾಟನೆ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸದಾನಂದಗೌಡರು, ಇದು ತಮ್ಮ ವಿರುದ್ಧದ ಪಿತೂರಿ ಎಂದು ಆರೋಪಿಸಿದ್ದು, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಇನ್ನು ಆಡಿಯೋ ವೈರಲ್ ಸಂಬಂಧ ಸದಾನಂದಗೌಡ ಪ್ರತಿಕ್ರಿಯಿಸಲು ನಿರಾಕರಿಸಿದಾದರೂ ಒಂದೆಡೆರು ಮಾತುಗಳನ್ನಾಡಿದ್ದಾರೆ. ನೋ ಕಾಮೆಂಟ್ಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಗೊತ್ತಿಲ್ಲ, ಹಾಗಾಗಿ ಉತ್ತರ ಕೊಡುವುದಿಲ್ಲ. ಆಡಿಯೋ ಬಗ್ಗೆ ಸತ್ಯ ಸಂಗತಿ ಹೊರಬರಲಿ. ನನ್ನ ಬಗ್ಗೆ ಬಹಳ ದಿನದಿಂದ ಚರ್ಚೆ ಆಗುತ್ತಿತ್ತು. ಕೋರ್ ಕಮಿಟಿ ಸಭೆಯಲ್ಲಿ ಕೆಲವು ಮಾತುಗಳನ್ನು ಹೇಳಿದ್ದೇನೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಕೇಳಿದ್ರೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ವಿಜಯೇಂದ್ರರನ್ನ ಕೆಳಗಿಳಿಸಲು ಪ್ಲ್ಯಾನ್? ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್

Follow Us