AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಯೋಧ್ಯೆ ರಾಮಮಂದಿರದ ಹುಂಡಿ ಹಣದಿಂದಲೇ ಹೊಸ ಮನೆ ಕಟ್ಟಿದ ಆರೋಪಿ

Video: ಅಯೋಧ್ಯೆ ರಾಮಮಂದಿರದ ಹುಂಡಿ ಹಣದಿಂದಲೇ ಹೊಸ ಮನೆ ಕಟ್ಟಿದ ಆರೋಪಿ

ಅಕ್ಷತಾ ವರ್ಕಾಡಿ
|

Updated on: Jul 02, 2026 | 10:48 AM

Share

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ, ಕದ್ದ ಹಣದಿಂದ ಹೊಸ ಮನೆ ಕಟ್ಟಿದ ಆರೋಪಿ ಅನುಕಲ್ಪ್ ಮಿಶ್ರಾ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. SIT ತನಿಖೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವಶಪಡಿಸಿಕೊಳ್ಳಲಾಗಿದ್ದು, ಈತನ ಕುಟುಂಬಸ್ಥರ ಮತ್ತು ಟ್ರಸ್ಟ್‌ ಅಧಿಕಾರಿಗಳ ಪಾತ್ರದ ಬಗ್ಗೆಯೂ ಶೋಧ ನಡೆಸಲಾಗುತ್ತಿದೆ.

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿ ಅನುಕಲ್ಪ್ ಮಿಶ್ರಾ ಕದ್ದ ದೇಣಿಗೆ ಹಣದಿಂದಲೇ ಮನೆ ಕಟ್ಟಿದ್ದು ಬೆಳಕಿಗೆ ಬಂದಿದೆ. ಅನುಕಲ್ಪ್​ನ ಇನಾಯತ್​ ನಗರದ ಬಸವ ಮುತಲ್ಕೆ ಗ್ರಾಮದಲ್ಲಿನ ಹೊಸ ಮನೆ ಸೇರಿದಂತೆ ಆತನ ತಂದೆ ಮತ್ತು ಮೂವರು ಸಹೋದರರ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಭಕ್ತರು ಭಕ್ತಿಯಿಂದ ರಾಮಮಂದಿರಕ್ಕೆ ನೀಡಿದ್ದ ಹುಂಡಿ ಹಣವನ್ನು ಕಳವು ಮಾಡಿದ ಅನುಕಲ್ಪ್, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದೆ. ಜೂನ್ 23 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ SIT ಪ್ರಾಥಮಿಕ ವರದಿ ಸಲ್ಲಿಸಿದ್ದು, ಅನೇಕ ಆಘಾತಕಾರಿ ಅಂಶಗಳು ಬಹಿರಂಗಗೊಂಡಿವೆ. SIT ಅಧಿಕಾರಿಗಳು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ಇದುವರೆಗೆ ಸುಮಾರು 80 ಲಕ್ಷ ರೂಪಾಯಿಯಷ್ಟು ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಸಂಪಾದಿಸಿದ ಹಣವನ್ನು ಎಲ್ಲಿ ಹೂಡಿಕೆ ಮಾಡಲಾಗಿದೆ ಎಂಬುದರ ಬಗ್ಗೆ ತೀವ್ರ ವಿಚಾರಣೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Follow Us