ಮಸೀದಿ ಮುಂದೆ ಗವಿ ಸಿದ್ದಪ್ಪನ ಹೆಣ ಬಿದ್ದಿದ್ದರೂ ಆಜಾನ್, ವಿಡಿಯೋ ವೈರಲ್

Updated on: Aug 08, 2025 | 4:38 PM

ಕೊಪ್ಪಳ ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದ್ದ ಗವಿಸಿದ್ದಪ್ಪ (Gavisiddappa Murder Case) ನಾಯಕ​ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕ ಸಾದಿಕ್ ಕೋಲ್ಕಾರ್ ಎನ್ನುವಾತ ಗವಿಸಿದ್ದಪ್ಪನನ್ನು ಕೊಲೆ ಮಾಡಿದ್ದು, ಈ ಸಂಬಂಧ ಪೊಲೀಸರು ಈಗಾಗಲೇ ಹಂತಕ ಸಾದಿಕ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಪ್ಪಳ, (ಆಗಸ್ಟ್ 05): ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದ್ದ ಗವಿಸಿದ್ದಪ್ಪ (Gavisiddappa Murder Case) ನಾಯಕ​ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕ ಸಾದಿಕ್ ಕೋಲ್ಕಾರ್ ಎನ್ನುವಾತ ಗವಿಸಿದ್ದಪ್ಪನನ್ನು ಕೊಲೆ ಮಾಡಿದ್ದು, ಈ ಸಂಬಂಧ ಪೊಲೀಸರು ಈಗಾಗಲೇ ಹಂತಕ ಸಾದಿಕ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಸೀದಿ ಮುಂದೆ ಗವಿಸಿದ್ದಪ್ಪನ ಹೆಣ ಬಿದ್ದಿದ್ದರೂ ಸಹ ಆಜಾನ್ ಕೂಗಲಾಗಿದ್ದು, ವಿಡಿಯೋ ವೈರಲ್ ಆಗಿದೆ. ಇನ್ನು ಅವತ್ತೊಂದು ದಿನ ಅಜಾನ್ ಕೂಗದೆ ಹೋಗಿದ್ರೆ ಏನ ಆಗತಿತ್ತು ಎಂದು ಮೃತ ಗವಿಸಿದ್ದಪ್ಪನ ಸಹೋದರಿ ಅನ್ನಪೂರ್ಣ ಆಕ್ರೋಶ ವ್ಯಕ್ತಡಿಸಿದ್ದು,ನಮಾಜ್ ಮಾಡಿ ಸಂತೋಷ್ ಪಟ್ರಾ ನೀವು ಎಂದು ಮನೆಗೆ ಸಾಂತ್ವನ ಹೇಳಲು ಬಂದಿದ್ದ ಮುಸ್ಲಿಂ ಮುಖಂಡರಿಗೆ ತರಾಟೆಗೆ ತೆಗೆದುಕೊಂಡಿದ್ದಾಳೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More