ಮಸೀದಿ ಮುಂದೆ ಗವಿ ಸಿದ್ದಪ್ಪನ ಹೆಣ ಬಿದ್ದಿದ್ದರೂ ಆಜಾನ್, ವಿಡಿಯೋ ವೈರಲ್
ಕೊಪ್ಪಳ ನಗರದ ವಾರ್ಡ್ 3ರ ಮಸೀದಿ ಮುಂಭಾಗದಲ್ಲಿ ನಡೆದಿದ್ದ ಗವಿಸಿದ್ದಪ್ಪ (Gavisiddappa Murder Case) ನಾಯಕ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕ ಸಾದಿಕ್ ಕೋಲ್ಕಾರ್ ಎನ್ನುವಾತ ಗವಿಸಿದ್ದಪ್ಪನನ್ನು ಕೊಲೆ ಮಾಡಿದ್ದು, ಈ ಸಂಬಂಧ ಪೊಲೀಸರು ಈಗಾಗಲೇ ಹಂತಕ ಸಾದಿಕ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಪ್ಪಳ, (ಆಗಸ್ಟ್ 05): ನಗರದ ವಾರ್ಡ್ 3ರ ಮಸೀದಿ ಮುಂಭಾಗದಲ್ಲಿ ನಡೆದಿದ್ದ ಗವಿಸಿದ್ದಪ್ಪ (Gavisiddappa Murder Case) ನಾಯಕ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕ ಸಾದಿಕ್ ಕೋಲ್ಕಾರ್ ಎನ್ನುವಾತ ಗವಿಸಿದ್ದಪ್ಪನನ್ನು ಕೊಲೆ ಮಾಡಿದ್ದು, ಈ ಸಂಬಂಧ ಪೊಲೀಸರು ಈಗಾಗಲೇ ಹಂತಕ ಸಾದಿಕ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಸೀದಿ ಮುಂದೆ ಗವಿಸಿದ್ದಪ್ಪನ ಹೆಣ ಬಿದ್ದಿದ್ದರೂ ಸಹ ಆಜಾನ್ ಕೂಗಲಾಗಿದ್ದು, ವಿಡಿಯೋ ವೈರಲ್ ಆಗಿದೆ. ಇನ್ನು ಅವತ್ತೊಂದು ದಿನ ಅಜಾನ್ ಕೂಗದೆ ಹೋಗಿದ್ರೆ ಏನ ಆಗತಿತ್ತು ಎಂದು ಮೃತ ಗವಿಸಿದ್ದಪ್ಪನ ಸಹೋದರಿ ಅನ್ನಪೂರ್ಣ ಆಕ್ರೋಶ ವ್ಯಕ್ತಡಿಸಿದ್ದು,ನಮಾಜ್ ಮಾಡಿ ಸಂತೋಷ್ ಪಟ್ರಾ ನೀವು ಎಂದು ಮನೆಗೆ ಸಾಂತ್ವನ ಹೇಳಲು ಬಂದಿದ್ದ ಮುಸ್ಲಿಂ ಮುಖಂಡರಿಗೆ ತರಾಟೆಗೆ ತೆಗೆದುಕೊಂಡಿದ್ದಾಳೆ.