ಬಿಜೆಪಿಯವರು ತಾಕತ್ತಿದ್ದರೆ RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಬಿ.ಕೆ.ಹರಿಪ್ರಸಾದ್
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ, ಬಿಜೆಪಿ ನಾಯಕರನ್ನು "ಹೇಡಿಗಳು" ಎಂದು ಕರೆದಿದ್ದಾರೆ. ವಂದೇ ಮಾತರಂ ಗೀತೆ ಸಂಬಂಧ ಕಾಂಗ್ರೆಸ್ ನಿರ್ಣಯದ ಬಗ್ಗೆಯೂ ಸ್ಪಷ್ಟಪಡಿಸಿದ ಅವರು, ಇವರು ನಮ್ಮನ್ನು ಗಲ್ಲಿಗಾದರೂ ಹಾಕಲಿ, ಜೈಲಿಗಾದರೂ ಹಾಕಲಿ. ನಾವು ಹಾಡುವುದು ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಎಂದು ಪುನರುಚ್ಛರಿಸಿದ್ದಾರೆ.
ಬೆಂಗಳೂರು, ಆಗಸ್ಟ್ 20: ಬಿಜೆಪಿಯವರು ತಾಕತ್ತಿದ್ದರೆ RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದ್ದಾರೆ. CWC ನಿರ್ಣಯವನ್ನು ಸ್ವಾಗತ ಮಾಡುತ್ತೇನೆ. ಇವರು ನಮ್ಮನ್ನು ಗಲ್ಲಿಗಾದರೂ ಹಾಕಲಿ, ಜೈಲಿಗಾದರೂ ಹಾಕಲಿ. ನಾವು ಹಾಡುವುದು ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ. ಈ ವಿಚಾರದಲ್ಲಿ ರಾಜಕೀಯ ಮಾಡುವವರೇ ದೇಶದ್ರೋಹಿಗಳು. CWC ಸಭೆಯಲ್ಲಿ ಸರಿಯಾದ ನಿರ್ಣಯ ತೆಗೆದುಕೊಂಡಿದ್ದಾರೆ. ಇವರೆಲ್ಲ ಕಂಗನಾ ರಣಾವತ್ ಅಭಿಮಾನಿಗಳು. ಕಂಗನಾ ಹಾಡನ್ನೇ ಬೇಕಿದ್ದರೆ ಸಂಸತ್ಗೆ ತಂದು ರಾಷ್ಟ್ರಗೀತೆ ಮಾಡ್ತಾರೆ. ಬಿಜೆಪಿಯವರು ಪಾರ್ಲಿಮೆಂಟ್ಗೆ ಬರುವ ಧೈರ್ಯವೂ ಇಲ್ಲದ ನರಹೇಡಿಗಳು ಎಂದವರು ವಾಗ್ದಾಳಿ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

