ಸಿದ್ದರಾಮಯ್ಯ ಸಂಪುಟಕ್ಕೆ ವಾಪಸ್ಸಾಗುವ ತವಕದಲ್ಲಿರುವ ನಾಗೇಂದ್ರಗೆ ಈಡಿ ಆಘಾತ, ಎಲ್​ಹೆಚ್ ಕೊಠಡಿ ಮೇಲೆ ದಾಳಿ

Updated on: Jun 11, 2025 | 12:04 PM

ಲಭ್ಯವಿರುವ ಮಾಹಹಿತಿಯೊಂದರ ಪ್ರಕಾರ ಮಾಜಿ ಸಚಿವ ನಾಗೇಂದ್ರ ಅವರ ಡೈರಿಯಲ್ಲಿ ಸಂಸದ ತುಕಾರಾಂ ಅವರ ಹೆಸರು ನಮೂದಾಗಿದ್ದು ಅದೇ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ 10ಕ್ಕೂ ಹೆಚ್ಚು ಅಧಿಕಾರಿಗಳು ಸಂಡೂರುನಲ್ಲಿರುವ ಸಂಸದನ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿಯ ಮತ್ತೊಬ್ಬ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಮನೆ ಮೇಲೂ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಜೂನ್ 11: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ಬಹುಕೋಟಿ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಮತ್ತು ಕೂಡ್ಲಿಗಿ ಶಾಸಕ ಬಿ ನಾಗೇಂದ್ರ ವಾಪಸ್ಸು ಸಿದ್ದರಾಮಯ್ಯ ಸೇರಬೇಕು ಎಂದು ಕಸರತ್ತು ನಡೆಸಿರುವಾಗಲೇ ಕಂಟಕ ಎದುರಾಗಿದೆ. ಬಳ್ಳಾರಿ ಸಂಸದ ಇ ತುಕಾರಾಂ ಅವರ ಸಂಡೂರು ಮನೆ ಸೇರಿದಂತೆ ನಗರದ ಶಾಸಕರ ಭವನದಲ್ಲಿರುವ ನಾಗೇಂದ್ರ ಅವರ ಕೊಠಡಿಯ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಕಡತ ಮತ್ತು ಕಾಗದ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ನಿಮಗೆ ನೆನಪಿರಬಹುದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಬೆಳಕಿಗೆ ಬಂದು ₹187 ಕೋಟಿ ಹಣದ ದುರುಪಯೋಗವಾಗಿದೆ ಅಂತ ಗೊತ್ತಾದ ಬಳಿಕ ಕಳೆದ ವರ್ಷ ಜೂನ್ 6ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಿಗಮದ ಅಧೀಕ್ಷಕ ಪಿ ಚಂದ್ರಶೇಖರನ್ ಅವರ ಆತ್ಮಹತ್ಯೆಯ ನಂತರ ಹಗರಣ ಬಯಲಾಗಿತ್ತು

ಇದನ್ನೂ ಓದಿ:  ವಾಲ್ಮೀಕಿ ನಿಗಮದ ಹಗರಣ: ಬಿ ನಾಗೇಂದ್ರ ಫ್ಲ್ಯಾಟ್​ನಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಇಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More