ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ನನ್ನ ಮನಸಿಗೆ ನೋವಾಗಿದೆ ಎಂದ ಡಿಕೆ ಶಿವಕುಮಾರ್
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ರಾಜೀನಾಮೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾಗೇಂದ್ರ ಅವರ ರಾಜೀನಾಮೆ ತಮ್ಮ ಮನಸಿಗೆ ನೋವುಂಟು ಮಾಡಿದೆ ಎಂದ ಡಿಕೆಶಿ, ಪಕ್ಷದ ಹಿತದೃಷ್ಟಿಯಿಂದ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು. ನಾಗೇಂದ್ರ ಮೇಲಿನ ಆರೋಪಗಳು ಸುಳ್ಳು ಎಂದು ವಿಶ್ವಾಸ ವ್ಯಕ್ತಪಡಿಸಿದ ಡಿಕೆಶಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಬೆಂಗಳೂರು, ಆಗಸ್ಟ್ 28: ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ ಹಗರಣ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರ ತಲೆದಂಡಕ್ಕೆ ಕಾರಣವಾಗಿದೆ. ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಕಣ್ಣೀರು ಹಾಕುತ್ತಲೇ ಬಿ. ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ. ಸುದ್ದಿಗೋಷ್ಠಿ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಡಿಕೆ ಶಿವಕುಮಾರ್ನ್ನ ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ ಸಿಎಂ, ‘ನಾಗೇಂದ್ರ ನನ್ನನ್ನು ಭೇಟಿಯಾಗಿ ಬಹಳ ನೋವಿನಿಂದ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ದೇಶದ ಇತಿಹಾಸದಲ್ಲಿ ಒಂದೇ ವಿಚಾರಕ್ಕೆ 2 ಬಾರಿ ರಾಜೀನಾಮೆ ಕೊಟ್ಟಿದ್ರೆ ಅದು ನಾಗೇಂದ್ರ. ನಮ್ಮ ಹೈಕಮಾಂಡ್ ನಾಯಕರ ಗಮನಕ್ಕೆ ತರುತ್ತವೆ’ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
