‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ

‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
|

Updated on: Jun 18, 2024 | 8:05 PM

‘ಮೆಜೆಸ್ಟಿಕ್’ ಸಿನಿಮಾ ದರ್ಶನ್ ಪಾಲಿಗೆ ಅತ್ಯಂತ ಮಹತ್ವದ ಸಿನಿಮಾ. ಈ ಸಿನಿಮಾದ ನಿರ್ಮಾಪಕ ರಾಮಮೂರ್ತಿಯವರ ಬಗ್ಗೆ ದರ್ಶನ್​ಗೆ ವಿಶೇಷ ಗೌರವ. ಆದರೆ ಆ ಸಿನಿಮಾದ ಏಕೈಕ ನಿರ್ಮಾಪಕ ನಾನು ಎಂದಿರುವ ಭಾಮಾ ಹರೀಶ್, ‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ದರ್ಶನ್ ತಿಳಿದು ಮಾತನಾಡಬೇಕು ಎಂದಿದ್ದಾರೆ.

‘ಮೆಜೆಸ್ಟಿಕ್’ ಸಿನಿಮಾ ಬಿಡುಗಡೆ ಆಗಿ 22 ವರ್ಷಗಳಾಗಿವೆ. ಸಿನಿಮಾ ಬಿಡುಗಡೆ ಆಗಿ ಎರಡು ದಶಕ ಪೂರೈಸಿದಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಟ ದರ್ಶನ್ (Darshan Thoogudeepa) ಮಾತನಾಡಿ, ‘ಮೆಜೆಸ್ಟಿಕ್’ ಸಿನಿಮಾದ ನಿರ್ಮಾಪಕ ರಾಮಮೂರ್ತಿಯವರನ್ನು ಕೊಂಡಾಡಿದ್ದರು. ನನಗೆ ಪ್ರಶ್ನೆ ಮಾಡುವ ಹಕ್ಕು ಇರುವ ಒಬ್ಬರೇ ನಿರ್ಮಾಪಕ ರಾಮಮೂರ್ತಿ ಎಂದಿದ್ದರು. ಆದರೆ ಟಿವಿ9 ಜೊತೆ ಮಾತನಾಡಿರುವ ಹಿರಿಯ ನಿರ್ಮಾಪಕ ಭಾಮಾ ಹರೀಶ್, ‘ಮೆಜೆಸ್ಟಿಕ್’ ಸಿನಿಮಾದ ಏಕೈಕ ನಿರ್ಮಾಪಕ ತಾವೇ ಎಂದಿದ್ದಾರೆ. ಆ ಸಿನಿಮಾವನ್ನು ನನ್ನ ಮಗ ಉಲ್ಲಾಸ್ ಹೆಸರಿನಲ್ಲಿ ಪ್ರಾರಂಭಿಸಿದ್ದ ಉಲ್ಲಾಸ್ ಪ್ರೊಡಕ್ಷನ್ ಹೌಸ್ ಹೆಸರಲ್ಲಿ ನಿರ್ಮಿಸಿದ್ದು. ಆ ಸಿನಿಮಾದ ಸಂಪೂರ್ಣ ಸೈನಿಂಗ್ ಅಥಾರಿಟಿ ನನ್ನದ್ದೇ ಆಗಿತ್ತು ಎಂದಿದ್ದಾರೆ. ದರ್ಶನ್ ಎಲ್ಲೂ ಸಹ ತಮ್ಮ ಹೆಸರು ಉಲ್ಲೇಖ ಮಾಡದೇ ಇರುವ ಬಗ್ಗೆಯೂ ಮಾತನಾಡಿದ ಹರೀಶ್, ದರ್ಶನ್ ‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ತಿಳಿದುಕೊಂಡು, ಎಚ್ಚರಿಕೆಯಿಂದ ಮಾತನಾಡಬೇಕು ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ