Dharwad: ಶೂ ನಲ್ಲಿ ನಾಗರ ಹಾವಿನ ಮರಿ ಪತ್ತೆ; ಉರಗ ಪ್ರೇಮಿಯಿಂದ ರಕ್ಷಣೆ, ವಿಡಿಯೋ ವೈರಲ್

ನಗರದ ಹೊಸ ಯಲ್ಲಾಪುರ ನೇಕಾರ ಓಣಿಯಲ್ಲಿನ ನಂದಿತಾ ಶಿವನಗೌಡರ ಎಂಬುವವರ ಮನೆಯಲ್ಲಿ ನಾಗರ ಹಾವಿನ ಮರಿಯೊಂದು ಪತ್ತೆಯಾಗಿದ್ದು, ಉರಗ ಪ್ರೇಮಿಯೊಬ್ಬರು ಹಿಡಿದು ರಕ್ಷಣೆ ಮಾಡಿದ್ದಾರೆ.

ಧಾರವಾಡ: ನಗರದ ಹೊಸ ಯಲ್ಲಾಪುರ(Yellapur) ನೇಕಾರ ಓಣಿಯಲ್ಲಿನ ನಂದಿತಾ ಶಿವನಗೌಡರ ಎಂಬುವವರ ಮನೆಯಲ್ಲಿ ನಾಗರ ಹಾವಿನ ಮರಿಯೊಂದು ಪತ್ತೆಯಾಗಿದೆ. ಮನೆ ಹೊರಗೆ ಕಳಚಿಟ್ಟಿದ್ದ ಶೂನಲ್ಲಿ ನಾಗರ ಹಾವಿನ ಮರಿಯೊಂದು ಸೇರಿಕೊಂಡಿತ್ತು. ಅದನ್ನು ಗಮನಿಸಿದ ಮನೆಯವರು, ಉರಗ ಪ್ರೇಮಿಯಾದ ಯಲ್ಲಪ್ಪ ಎಂಬುವವರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅವರು ಮರಿಯನ್ನ ಹೊರಗೆ ತೆಗೆದು, ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅದೃಷ್ಟವಶಾತ್​ ಮುಂದಾಗುವ ಅನಾಹುತ ತಪ್ಪಿದಂತಾಗಿದೆ. ಆದಷ್ಟು ಮನೆಯ ಹೊರಗಡೆ ಇಟ್ಟ ಶೂ ಗಳನ್ನ ಒಮ್ಮೆ ಗಮನಿಸಿ ಧರಿಸುವುದು ಒಳ್ಳೆಯದು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us