AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಬಿಟ್ಟು ಹೋಗ್ಬೇಡಿ ಸರ್​: ಶಿಕ್ಷಕನಿಗೆ ವಿದ್ಯಾರ್ಥಿಗಳ ಕಣ್ಣೀರಿನ ಬೀಳ್ಕೊಡುಗೆ

ನಮ್ಮನ್ನು ಬಿಟ್ಟು ಹೋಗ್ಬೇಡಿ ಸರ್​: ಶಿಕ್ಷಕನಿಗೆ ವಿದ್ಯಾರ್ಥಿಗಳ ಕಣ್ಣೀರಿನ ಬೀಳ್ಕೊಡುಗೆ

ಅಕ್ಷಯ್​ ಪಲ್ಲಮಜಲು​​
|

Updated on:Nov 29, 2025 | 1:32 PM

Share

ಬಾಗಲಕೋಟೆಯ ಕರಡಿ ಗ್ರಾಮದ ದೈಹಿಕ ಶಿಕ್ಷಕ ಗುರುನಾಥ ಕೊಂಡಕಾರ ವರ್ಗಾವಣೆಗೊಂಡಿದ್ದಾರೆ. ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ ಕೊಂಡಕಾರರನ್ನು ಕಳುಹಿಸಲು ವಿದ್ಯಾರ್ಥಿಗಳು ಕಣ್ಣೀರು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. "ನಮ್ಮನ್ನು ಬಿಟ್ಟು ಹೋಗಬೇಡಿ ಸರ್" ಎಂದು ಮಕ್ಕಳು ಗೋಳಾಡಿದ್ದು, ಶಿಕ್ಷಕ-ವಿದ್ಯಾರ್ಥಿಗಳ ಬಾಂಧವ್ಯದ ಆಳವನ್ನು ಬಿಂಬಿಸಿದೆ. ಈ ಘಟನೆ ಇಡೀ ರಾಜ್ಯದ ಗಮನ ಸೆಳೆದಿದೆ.

ಬಾಗಲಕೋಟೆ, ನ.29: ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗುರುನಾಥ ಕೊಂಡಕಾರ ಎಂಬ ದೈಹಿಕ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದಾರೆ. ಇವರು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ. ಇದೀಗ ಅವರು ವರ್ಗಾವಣೆಗೊಂಡಿದಕ್ಕೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಭಾರೀ ವೈರಲ್​ ಆಗಿದೆ. ನಮ್ಮನ್ನು ಬಿಟ್ಟು ಹೋಗಬೇಡಿ ಸರ್ ಎಂದು ವಿದ್ಯಾರ್ಥಿಗಳು ಗೋಳಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 29, 2025 01:29 PM

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More