ನಮ್ಮನ್ನು ಬಿಟ್ಟು ಹೋಗ್ಬೇಡಿ ಸರ್​: ಶಿಕ್ಷಕನಿಗೆ ವಿದ್ಯಾರ್ಥಿಗಳ ಕಣ್ಣೀರಿನ ಬೀಳ್ಕೊಡುಗೆ

Updated on: Nov 29, 2025 | 1:32 PM

ಬಾಗಲಕೋಟೆಯ ಕರಡಿ ಗ್ರಾಮದ ದೈಹಿಕ ಶಿಕ್ಷಕ ಗುರುನಾಥ ಕೊಂಡಕಾರ ವರ್ಗಾವಣೆಗೊಂಡಿದ್ದಾರೆ. ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ ಕೊಂಡಕಾರರನ್ನು ಕಳುಹಿಸಲು ವಿದ್ಯಾರ್ಥಿಗಳು ಕಣ್ಣೀರು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. "ನಮ್ಮನ್ನು ಬಿಟ್ಟು ಹೋಗಬೇಡಿ ಸರ್" ಎಂದು ಮಕ್ಕಳು ಗೋಳಾಡಿದ್ದು, ಶಿಕ್ಷಕ-ವಿದ್ಯಾರ್ಥಿಗಳ ಬಾಂಧವ್ಯದ ಆಳವನ್ನು ಬಿಂಬಿಸಿದೆ. ಈ ಘಟನೆ ಇಡೀ ರಾಜ್ಯದ ಗಮನ ಸೆಳೆದಿದೆ.

ಬಾಗಲಕೋಟೆ, ನ.29: ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗುರುನಾಥ ಕೊಂಡಕಾರ ಎಂಬ ದೈಹಿಕ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದಾರೆ. ಇವರು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ. ಇದೀಗ ಅವರು ವರ್ಗಾವಣೆಗೊಂಡಿದಕ್ಕೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಭಾರೀ ವೈರಲ್​ ಆಗಿದೆ. ನಮ್ಮನ್ನು ಬಿಟ್ಟು ಹೋಗಬೇಡಿ ಸರ್ ಎಂದು ವಿದ್ಯಾರ್ಥಿಗಳು ಗೋಳಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 29, 2025 01:29 PM
Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More