6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ

Edited By: ವಿವೇಕ ಬಿರಾದಾರ

Updated on: May 02, 2025 | 10:55 PM

ಬಾಗಲಕೋಟೆಯ ನವನಗರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಆರು ವಿಷಯಗಳಲ್ಲಿಯೂ ಫೇಲ್ ಆದ ಅಭಿಷೇಕ್ ಯಲ್ಲಪ್ಪ ಚೊಳಚಗುಡ್ಡ ಎಂಬ ವಿದ್ಯಾರ್ಥಿಗೆ ಅವನ ಕುಟುಂಬ ಕೇಕ್ ತಿನ್ನಿಸಿ ಧೈರ್ಯ ತುಂಬಿದೆ. ಪೋಷಕರು, ಸಹೋದರ, ಸಹೋದರಿ ಮತ್ತು ಅಜ್ಜಿ ಸೇರಿದಂತೆ ಇಡೀ ಕುಟುಂಬ ಈ ಸಂದರ್ಭದಲ್ಲಿ ಒಟ್ಟಾಗಿ ನಿಂತು ಅಭಿಷೇಕ್‌ಗೆ ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಪ್ರೋತ್ಸಾಹ ನೀಡಿದೆ. ಈ ಘಟನೆ ಕುಟುಂಬದ ಪ್ರೀತಿ ಮತ್ತು ಬೆಂಬಲದ ಶಕ್ತಿಯನ್ನು ತೋರಿಸುತ್ತದೆ.

ಬಾಗಲಕೋಟೆ, ಮೇ 02: ಎಸ್​ಎಸ್​ಎಲ್​ಸಿ 6 ವಿಷಯದಲ್ಲೂ ಫೇಲ್ ಆದ ಮಗನಿಗೆ ಪೋಷಕರು ಕೇಕ್‌ ತಿನ್ನಿಸಿ ಧೈರ್ಯ ಹೇಳಿದ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಫೇಲ್ ಆದ ಮನೆ ಮಗನಿಗೆ ತಂದೆ, ತಾಯಿ, ಸಹೋದರ, ಸಹೋದರಿ ಅಜ್ಜಿ ಹಾಗೂ ಕುಟುಂಬದ ಇತರ ಸದಸ್ಯರು ಕೇಕ್ ತಿನ್ನಿಸಿ ಧೈರ್ಯ ಹೇಳಿದ್ದಾರೆ. ಅಭಿಷೇಕ ಯಲ್ಲಪ್ಪ ಚೊಳಚಗುಡ್ಡ ಎಂಬುವರು ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 200 ಅಂಕ (ಶೇ 32 ರಷ್ಟು) ಅಂಕ ಪಡೆದು ಆರಕ್ಕೆ ಆರೂ ವಿಷಯದಲ್ಲಿ ಪೇಲ್​ ಆಗಿದ್ದಾರೆ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More