AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Mar 19, 2026 | 12:03 PM

Share

ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ಜೋರಾಗತೊಡಗಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನೂ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮವೂ ಜೋರಾಗಿದೆ. ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15.50 ಲಕ್ಷ ರೂ. ನಗದನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ ಎಂಬುವರು ಪ್ರಯಾಣಿಸುತ್ತಿದ್ದರು.

ಚುನಾವಣೆ ಹಿನ್ನಲೆಯಲ್ಲಿ ನಿಯೋಜಿಸಲಾದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ ಸಂಜೆ ಸುಮಾರು 7 ಗಂಟೆಯ ಸುಮಾರಿಗೆ ವಾಹನ ತಪಾಸಣೆ ನಡೆಸಿದಾಗ, ಯಾವುದೇ ಸರಿಯಾದ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ನಗದು ಪತ್ತೆಯಾಯಿತು. ತಕ್ಷಣವೇ ಹಣವನ್ನು ವಶಕ್ಕೆ ಪಡೆದು ಮುಂದಿನ ಪರಿಶೀಲನೆಗೆ ಒಪ್ಪಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 19, 2026 12:01 PM
Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More