ಬಾಗಲಕೋಟೆ: ಹುಚ್ಚೆದ್ದ ಗೋವಿನಿಂದ ಜನರ ಮೇಲೆ ದಾಳಿ

Edited By: ವಿವೇಕ ಬಿರಾದಾರ

Updated on: Feb 02, 2025 | 2:44 PM

ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಗೋವು ಒಬ್ಬ ವ್ಯಕ್ತಿಯ ಮೇಲೆ ದಾಳಿ ಮಾಡಿದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದಲ್ಲಿ ಹಲವರ ಮೇಲೆ ಗೋವು ದಾಳಿ ಮಾಡಿದ್ದರಿಂದ ಹಿಂದು ಸೇವಾ ಸಮಿತಿ ಗೋವನ್ನು ಸೆರೆಹಿಡಿದಿದೆ. ಆದರೆ ಆಸ್ಪತ್ರೆಗೆ ಸಾಗಿಸುವಾಗ ಗೋವು ದಾರಿಯಲ್ಲಿಯೇ ಮೃತಪಟ್ಟಿತು. ಸಮಿತಿ ಸದಸ್ಯರು ಗೋವಿನ ಅಂತ್ಯಕ್ರಿಯೆ ನೆರವೇರಿಸಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆ ಕಾರ್ಯಾಲಯದ ಬಳಿ ವ್ಯಕ್ತಿಯ ಮೇಲೆ ಹುಚ್ಚೆದ್ದ ಗೋವು ದಾಳಿ ಮಾಡಿದೆ. ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ‌ಯಾಗಿದೆ. ನಗರದ ವಿವಿಧ ಕಡೆ ಜನರ‌ ಮೇಲೆ ಗೋವು ದಾಳಿ ಮಾಡಿದೆ. ಇದನ್ನು ಕಂಡ ಹಿಂದು ಸೇವಾ ಸಮಿತಿ ಸಂಘಟನೆ ಸದಸ್ಯರು ಗೋವನ್ನು ಸೆರೆ ಹಿಡಿದರು. ಬಳಿಕ, ಆಸ್ಪತ್ರೆಗೆ ಸಾಗಿಸುವ ವೇಳೆ ಗೋವು ದಾರಿ ಮಧ್ಯೆ ಮೃತಪಟ್ಟಿದೆ. ಹಿಂದು ಸೇವಾ ಸಮಿತಿ ಕಾರ್ಯಕರ್ತರು ಗೋವಿನ ಅಂತ್ಯಸಂಸ್ಕಾರ ‌ಮಾಡಿದರು.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More