ಬಾಗಲಕೋಟೆ: ಅಯೋಧ್ಯೆ ರಾಮ ಮಂದಿರ ಮಂಡಲಾರಾಧನೆ ಪೂಜೆಗೆ ಮುಧೋಳನ ಗುರುನಾಥ್​ ಜೋಶಿ ಆಯ್ಕೆ

Edited By:

Updated on: Feb 12, 2024 | 8:59 AM

ಅಯೋಧ್ಯೆಯಲ್ಲಿ ಬಾಲ ರಾಮನ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ 48 ದಿನಗಳ ಕಾಲ ಮಂಡಲಾರಾಧನೆ ನಡೆಯಲಿದೆ. ಫೆ.15, 16 ರಂದು ನಡೆಯಲಿರುವ ಮಂಡಲಾರಾಧನೆ ಪೂಜೆಗೆ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಅರ್ಜಕ ಮುಧೋಳನ ಗುರುನಾಥ್​ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ. ಅರ್ಚಕ ಗುರುನಾಥ್ ಜೋಶಿ ಅವರು ಮುಧೋಳದಲ್ಲಿ ಸದ್ಗುರು ಚಿದಂಬರ ವೈದಿಕ ಜ್ಯೋತಿಷ್ಯಾಲಯ ನಡೆಸುತ್ತಿದ್ದಾರೆ.

ಬಾಗಲಕೋಟೆ, ಫೆಬ್ರವರಿ 12: ಅಯೋಧ್ಯೆಯಲ್ಲಿ (Ayodhya) ಬಾಲ ರಾಮನ (Ramlalla) ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಸಂಖ್ಯ ಭಕ್ತಾದಿಗಳು ಪ್ರತಿನಿತ್ಯ ಭೇಟಿ ನೀಡುತ್ತಿದ್ದಾರೆ. ಈ ರಾಮ ಮಂದಿರಕ್ಕೂ ಮತ್ತು ಕರ್ನಾಟಕಕ್ಕೂ (Karnataka) ಅವಿನಾಭಾವ ಸಂಬಂಧವಿದೆ. ಈ ರಾಮ ಮಂದಿರ ನಿರ್ಮಾಣದಲ್ಲಿ ಕನ್ನಡಿಗರ ಕೈ ಮೇಲಾಗಿದೆ. ಇನ್ನೂ ಮಂದಿರದಲ್ಲಿ ವಿರಾಜಮಾನವಾಗಿರುವ ಬಾಲ ರಾಮನ ಮೂರ್ತಿಯನ್ನು ನಮ್ಮ ಸಾಂಸ್ಕೃತಿಕ ನಗರಿ ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ್ (Mysore Arun Yogiraj)​ ಕೆತ್ತಿದ್ದಾರೆ. ಇದು ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ. ಇದೀಗ ಅಯೋಧ್ಯೆ ರಾಮ ಮಂದಿರ ಮಂಡಲಾರಾಧನೆ (Mandalaradhne) ಪೂಜೆಗೆ ಮುಧೋಳ (Mudhol) ಮೂಲದ ಅರ್ಚಕ ಗುರುನಾಥ್ ಜೋಶಿ (Gurunath Joshi) ಆಯ್ಕೆಯಾಗಿದ್ದಾರೆ. ಅರ್ಚಕ ಗುರುನಾಥ್ ಜೋಶಿ ಅವರು ಮುರಗೋಡ ಚಿದಂಬರ ವೇದ ಸಂಸ್ಕೃತ ಪಾಠಶಾಲೆಯಲ್ಲಿ ಶುಕ್ಲ ಯಜುರ್ವೇದ ಅಧ್ಯಯನ ಅಧ್ಯಯನ‌ ಮಾಡಿದ್ದಾರೆ.

ಅರ್ಚಕ ಗುರುನಾಥ್ ಜೋಶಿ ಅವರನ್ನು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಸದಸ್ಯರು, ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನತೀರ್ಥ ಶ್ರೀಗಳು ಆಯ್ಕೆ ಮಾಡಿದ್ದಾರೆ. ಅಯೋಧ್ಯೆ ರಾಮ ಮಂದಿರದಲ್ಲಿ 48 ದಿನಗಳ ಕಾಲ ಮಂಡಲಾರಾಧನೆ ನಡೆಯಲಿದೆ. ಫೆ.15, 16 ರಂದು ನಡೆಯಲಿರುವ ಮಂಡಲಾರಾಧನೆ ಪೂಜೆಯಲ್ಲಿ ಅರ್ಚಕ ಗುರುನಾಥ್ ಜೋಶಿ ಅವರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಬಾಲರಾಮನ ಕಣ್ಣುಗಳನ್ನು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಫೋಟೋ ಹಂಚಿಕೊಂಡ ಶಿಲ್ಪಿ ಅರುಣ್ ಯೋಗಿರಾಜ್

ಅರ್ಚಕ ಗುರುನಾಥ್ ಜೋಶಿ ಅವರು ಸದ್ಯ ಸದ್ಗುರು ಚಿದಂಬರ ವೈದಿಕ ಜ್ಯೋತಿಷ್ಯಾಲಯ ನಡೆಸುತ್ತಿದ್ದಾರೆ. ಈ ಹಿಂದೆ ಮುಧೋಳದ ಸಾಯಿ ಬಾಬಾ ದೇಗುಲದ ಅರ್ಚಕರಾಗಿದ್ದರು.

ಅಯೋಧ್ಯೆ ರಾಮ ಮಂದಿರ‌ ‌ಮಂಡಲಾರಾಧನೆಗೆ ನನ್ನನ್ನು ಆಯ್ಕೆ ಮಾಡಿದ್ದು ನಮ್ಮ ಪೂರ್ವಜರು ‌ಮಾಡಿದ ಪುಣ್ಯ. ಇಂತಹ ಅವಕಾಶ ಸಿಕ್ಕಿದ್ದು ಎಂದು ಮರೆಯಲಾಗದು. ಪ್ರಭು ಶ್ರೀರಾಮಚಂದ್ರ ಎಲ್ಲರಿಗೂ ಒಳಿತನ್ನು‌ ಮಾಡಲಿ ಎಂದು ಗುರುನಾಥ ಜೋಶಿ ಹಾರೈಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More