ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಅತಿಯಾದ ಸೌಂಡ್ ವಿರುದ್ಧ ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯ ಮದೀನಾ ಕಾಲೋನಿಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮತ್ತು ಜೋರಾದ ಅಜಾನ್ ಕೂಗಿದಕ್ಕೆ ಸ್ಥಳೀಯರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಅತಿಯಾದ ಧ್ವನಿ ಮಾಲಿನ್ಯದ ಬಗ್ಗೆ ದೂರು ನೀಡಿ, ಕೂಡಲೇ ಕ್ರಮ ಕೈಗೊಳ್ಳುವಂತೆ ನಗರ ಠಾಣೆಗೆ ಮೌಖಿಕ ದೂರು ನೀಡಿದ್ದಾರೆ. ಪೊಲೀಸರು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ತೆರಳಿದರು.
ಬಾಗಲಕೋಟೆ, ಆಗಸ್ಟ್ 21: ನಗರದ ಮದೀನಾ ಕಾಲೋನಿಯಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಲಾಗಿದೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ಅತಿಯಾದ ಶಬ್ದದಲ್ಲಿ ಮೈಕ್ ಹಾಕಿ ಅಜಾನ್ ಕೂಗಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು, ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಾಗಲಕೋಟೆ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಈ ಭಾಗದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿದ್ದರೆ, ಸಾವಿರಾರು ಹಿಂದೂ ಕುಟುಂಬಗಳು ವಾಸಿಸುತ್ತಿದ್ದು, ಸುತ್ತಮುತ್ತ ಆಸ್ಪತ್ರೆಗಳೂ ಇರುವುದರಿಂದ ಜೋರಾದ ಅಜಾನ್ನಿಂದ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದ ಕಾರ್ಯಕರ್ತರು, ಕೂಡಲೇ ಅನಧಿಕೃತ ಮಸೀದಿ ಹಾಗೂ ಮೈಕ್ ಶಬ್ದದ ಹಾವಳಿಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಮೌಖಿಕ ದೂರು ಸಲ್ಲಿಸಿದರು. ಬಳಿಕ ಸೌಂಡ್ ಕಡಿಮೆ ಮಾಡಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

