ಗ್ರಾಮಕ್ಕೆ ಖಾಯಂ ಸ್ಮಶಾನ ಬೇಕು; ರಸ್ತೆ ತಡೆದು ಬಾಗಲಕೋಟೆ ಸೀಗಿಕೇರಿ ಗ್ರಾಮಸ್ಥರ ಪ್ರತಿಭಟನೆ

Edited By: ಆಯೇಷಾ ಬಾನು

Updated on: Jul 31, 2023 | 1:17 PM

ಬಾಗಲಕೋಟೆಯ ಸೀಗಿಕೇರಿ ಗ್ರಾಮದಲ್ಲಿ ಶಂಕ್ರಪ್ಪ ಚಲವಾದಿ ಎಂಬ 95 ವರ್ಷದ ವೃದ್ಧರೋರ್ವರು ಮೃತಪಟ್ಟಿದ್ದಾರೆ. ವೃದ್ದನ ಹೂಳಲು ಗ್ರಾಮದಲ್ಲಿ ಸ್ಮಶಾನ ಇಲ್ಲ. ಹೀಗಾಗಿ ಸ್ಮಶಾನಕ್ಕಾಗಿ ಆಗ್ರಹಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.

ಬಾಗಲಕೋಟೆ, ಜುಲೈ 31: ಗ್ರಾಮದಲ್ಲಿ ಸಾವು ಸಂಭವಿಸಿದರೆ ಹೂಳಲು ಸ್ಮಶಾನವಿಲ್ಲ. ಹೀಗಾಗಿ ಗ್ರಾಮಕ್ಕೊಂದು ಸ್ಮಶಾನ ಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬಾಗಲಕೋಟೆ ತಾಲೂಕಿನ ಸೀಗಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶಂಕ್ರಪ್ಪ ಚಲವಾದಿ ಎಂಬ 95 ವರ್ಷದ ವೃದ್ಧರೋರ್ವರು ಮೃತಪಟ್ಟಿದ್ದಾರೆ. ವೃದ್ದನ ಹೂಳಲು ಗ್ರಾಮದಲ್ಲಿ ಸ್ಮಶಾನ ಇಲ್ಲ. ಹೀಗಾಗಿ ಸ್ಮಶಾನಕ್ಕಾಗಿ ಆಗ್ರಹಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಸೀಗಿಕೇರಿ ಗ್ರಾಮದ ಬಳಿ ರಾಯಚೂರು-ಬಾಗಲಕೋಟೆ ಮಾರ್ಗದ ರಸ್ತೆ ತಡೆದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ರಾತ್ರಿ ವಯೋಸಹಜವಾಗಿ ಶಂಕ್ರಪ್ಪ ಚಲವಾದಿ ಕೊನೆಯುಸಿರೆಳೆದಿದ್ದು ಅಂತ್ಯ ಸಂಸ್ಕಾರಕ್ಕೆ ಖಾಸಗಿ ಜಮೀನಿನವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನಮಗೆ ಸ್ಮಶಾನ ಇಲ್ಲ, ಎಲ್ಲಿ ಅಂತ್ಯಸಂಸ್ಕಾರ ಮಾಡಬೇಕು. ನಮಗೆ ಖಾಯಂ ಸ್ಮಶಾನ ಬೇಕೆಂದು ರಸ್ತೆಗೆ ಮುಳ್ಳು ಕಂಟಿ ಹಾಕಿ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸಿದ್ದಾರೆ. ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕೆಎಸ್​ಆರ್​ಟಿಸಿ ಬಸ್, ಶಾಲಾ ಕಾಲೇಜು ಬಸ್ ಸೇರಿದಂತೆ ಎಲ್ಲ ವಾಹನ ತಡೆಯಲಾಗಿದೆ. ಶಾಲೆಗೆ ಹೋಗಲಾಗದೆ ವಿದ್ಯಾರ್ಥಿಗಳು ಪರದಾಡಿದ್ದಾರೆ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More