AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ

ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 15, 2025 | 6:30 PM

Share

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡದಲ್ಲಿ ಆಚರಿಸುವ ಹೋಳಿ ಹಬ್ಬ ಬೇರೆಡೆಗಳಿಗಿಂತ ಭಿನ್ನವಾಗಿದೆ. ಋತುಮತಿಯಾಗದ ಬಾಲಕಿಯನ್ನು ಮೆರವಣಿಗೆ ಮಾಡುವ ಆಚರಣೆ ಇಲ್ಲಿದೆ. ಕಳೆದ ಐವತ್ತು ವರ್ಷದಿಂದ ಈ ವಿಶೇಷ ಆಚರಣೆ ನಡೆದುಕೊಂಡು ಬಂದಿದೆ. ಈ ವೇಳೆ ನಾಗಾಸಾಧುಗಳ ವೇಷದಲ್ಲಿ ಮಕ್ಕಳು ಗಮನ ಸೆಳೆದಿದ್ದಾರೆ.

ಬಾಗಲಕೋಟೆ, ಮಾರ್ಚ್​ 15: ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ಕುಂಬಾರ ಓಣಿಯಲ್ಲಿ ವಿಶೇಷವಾಗಿ ಹೋಳಿ (holi) ಆಚರಣೆ ಮಾಡಲಾಗಿದೆ. ಬಣ್ಣದ ಆಟವಿಲ್ಲದೆ, ಹುಣ್ಣಿಮೆಯಂದು ಕಾಮದಹನ ಮಾತ್ರ ನಡೆಯುತ್ತದೆ. ಮರುದಿನ, ಕಾಮನ ಶವದ ಬದಲು ಋತುಮತಿಯಾಗದ ಬಾಲಕಿಯನ್ನು ಅಲಂಕರಿಸಿ ಮೆರವಣಿಗೆ ಮಾಡುವುದು ವಿಶೇಷ. ಕಳೆದ ಐವತ್ತು ವರ್ಷಗಳಿಂದ ಈ ಆಚರಣೆ ನಡೆಯುತ್ತಿದೆ. ಕುಂಭಮೇಳದಿಂದಾಗಿ ಎಲ್ಲೆಡೆ ನಾಗಾಸಾಧು ಬಗ್ಗೆ ಗೊತ್ತಾಗಿದೆ. ಹಾಗಾಗಿ ನಾಗಾಸಾಧುಗಳ ವೇಷಧಾರಿ ಮಕ್ಕಳು ಈ ಮೆರವಣಿಗೆಯಲ್ಲಿ ಭಾಗವಹಿಸಿ ಎಲ್ಲರ ಗಮನಸೆಳೆದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More