ಹೋದ ಜೀವ ವಾಪಸ್ ಕೊಡ್ತೀರಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಬಾಗಲಕೋಟೆಯ ಬನಹಟ್ಟಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಕೆ.ಎಸ್. ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಹತ್ಯೆ ಪ್ರಕರಣ, ಆರ್ಎಸ್ಎಸ್ ಕಾರ್ಯಕರ್ತನ ಮೇಲಿನ ಕ್ರಮ ಮತ್ತು ಮಸೀದಿಗಳಿಗೆ ಸಂಬಂಧಿಸಿದಂತೆ ಎಚ್ಚರಿಕೆಗಳನ್ನು ನೀಡಿದ ಅವರು, ಕರ್ನಾಟಕವನ್ನು ಕೇಸರಿಮಯ ರಾಜ್ಯವನ್ನಾಗಿ ಮಾಡುವಂತೆ ಕರೆ ನೀಡಿದರು.
ಬಾಗಲಕೋಟೆ, ಮಾರ್ಚ್ 01: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮಸೀದಿಗಳಿಂದ ಕಲ್ಲು ತೂರಾಟ ನಡೆದರೆ ಅವುಗಳನ್ನು ಸೀಜ್ ಮಾಡಿ, ಮುಲ್ಲಾನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ, ಬಾಬರಿ ಮಸೀದಿ ಧ್ವಂಸವಾದಂತೆ ಕರ್ನಾಟಕದಲ್ಲಿಯೂ ಹಲವು ಮಸೀದಿಗಳು ಧ್ವಂಸವಾಗುವ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 01, 2026 04:54 PM
Follow Us
