ಬಾಗಲಕೋಟೆ ಮೋದಿ ಸಮಾವೇಶದಲ್ಲಿ ಕಂಬಳಿ: ಸ್ವಾರಸ್ಯಕರ ಸಂಗತಿ ಬಿಚ್ಚಿಟ್ಟ ಚರಂತಿಮಠ

Edited By:

Updated on: May 01, 2024 | 7:19 PM

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಪ್ರಧಾನಿ ಮೋದಿ ಕಂಬಳಿ ಹಾಕಿಕೊಳ್ಳುವ ಸ್ಟೈಲ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ಸ್ವಾರಸ್ಯಕರ ಘಟನೆ ಮತ್ತು ಮೋದಿ ಜೊತೆ ನಡೆದ ಸಂಭಾಷಣೆ ಮಾಹಿತಿಯನ್ನು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಂಚಿಕೊಂಡಿದ್ದಾರೆ.

ಬಾಗಲಕೋಟೆ, ಮೇ 1: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಮಾವೇಶ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಪ್ರಧಾನಿ ಮೋದಿ ಕಂಬಳಿ ಹಾಕಿಕೊಳ್ಳುವ ಸ್ಟೈಲ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ಸ್ವಾರಸ್ಯಕರ ಘಟನೆ ಮತ್ತು ಮೋದಿ ಜೊತೆ ನಡೆದ ಸಂಭಾಷಣೆ ಮಾಹಿತಿಯನ್ನು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ (Veeranna Charantimath) ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಕಂಬಳಿ ನೋಡುತ್ತಲೇ ಫುಲ್ ಖುಷಿ ಆದರು. ನಾನು ಶಾಲು ಹಾಕಿದ ಹಾಗೇ ಮೋದಿಗೆ ಎರಡೂ ಕಡೆ ಕಂಬಳಿ ಹಾಕಿದ್ದೆ. ಅದು ಹಾಗಲ್ಲ, ಹೀಗೆ ಹಾಕಿಕೊಳ್ಳಬೇಕು ಎಂದು ಮೋದಿಯವರೇ ಹೇಳಿದ್ರು. ಕಂಬಳಿ ಬಗ್ಗೆ ಮೋದಿ ಅವರಿಗೆ ಬಹಳ ಗೌರವ ಇದೆ. ಕಂಬಳಿ ನೋಡಿದ ಕೂಡಲೇ ಅದನ್ನು ತಗೊಂಡು ಬನ್ನಿ ಅಂತಾ ಹೇಳಿದರು. ಕಂಬಳಿ ಹಾಕಿಕೊಂಡೇ ಭಾಷಣ ಮಾಡಿದರು. ಹೆಲಿಕಾಪ್ಟರ್​ ಬಳಿ ಹೋಗೋವರೆಗೂ ಮೋದಿ ಕಂಬಳಿ ಹಾಕಿಕೊಂಡಿದ್ದರು. ಜೊತೆಗೆ ಸೆಂಗೋಲ್ ಕೂಡ ಪ್ರಧಾನಿ ಮೋದಿಗೆ ನೀಡಿದ್ವಿ. ಸೆಂಗೋಲ್ ಕೊಡಲು ಎಸ್​ಪಿಜಿಯವರು ಮೊದಲು ಅನುಮತಿ ಕೊಡಲಿಲ್ಲ. ಆಗ ಸೆಂಗೋಲ್ ಮಾಡಿಸಿದ್ದೇವೆ, ಆದರೆ ಸಿಬ್ಬಂದಿ ಬಿಡುತ್ತಿಲ್ಲ ಅಂದೆ. ಬಳಿಕ ಮೋದಿಯವರೇ ಸೆಂಗೋಲ್ ತರಿಸಿಕೊಂಡರು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More