ಮೋದಿ ಪ್ರಧಾನಿಯಾಗಲೆಂದು ಹರಕೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಮಾಡಿದ್ದ ರಾಮ ಭಕ್ತನಿಗೆ ನಿರಾಸೆ

ಬಾಗಲಕೋಟೆ ‌ಜಿಲ್ಲೆ ಇಳಕಲ್ ತಾಲ್ಲೂಕಿನ ಬಂಡರಗಲ್ ಗ್ರಾಮದ ಮುತ್ತು ಕರಮುಡಿ, ಏಪ್ರಿಲ್ 1 ರಂದು ಬಂಡರಗಲ್ ಗ್ರಾಮದಿಂದ ಪಾದಯಾತ್ರೆ ಆರಂಭಿಸಿ ಜೂನ್ 1 ಕ್ಕೆ 2000 ಕಿಮೀ ಪಾದಯಾತ್ರೆ ಮೂಲಕ ಬಂದು ತಲುಪಿದ್ದಾರೆ. ಆದರೆ ಗರ್ಭಗುಡಿ ದ್ವಾರದ ಮುಂದೆ ನಿಂತು ರಾಮ ದರ್ಶನಕ್ಕೆ ಅವಕಾಶ ಸಿಗದಿದ್ದಕ್ಕೆ ವಿಡಿಯೋ ಮೂಲಕ ನಿರಾಸೆ ವ್ಯಕ್ತಪಡಿಸಿದ್ದಾರೆ.

ಮೋದಿ ಪ್ರಧಾನಿಯಾಗಲೆಂದು ಹರಕೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಮಾಡಿದ್ದ ರಾಮ ಭಕ್ತನಿಗೆ ನಿರಾಸೆ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 06, 2024 | 3:55 PM

ಬಾಗಲಕೋಟೆ, ಜೂನ್​ 06: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ ನಿರ್ಮಾಣ ಆದಾಗಿನಿಂದ ಸಾಕಷ್ಟು ರಾಮ ಭಕ್ತರು ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ರಾಮ ಭಕ್ತರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಆದರೆ ಅಯೋಧ್ಯೆವರೆಗೂ ಪಾದಯಾತ್ರೆ ಮಾಡಿದ ಇಲ್ಲೊಬ್ಬ ರಾಮ ಭಕ್ತನಿಗೆ ಗರ್ಭಗುಡಿ ದ್ವಾರದ ಮುಂದೆ ನಿಂತು ರಾಮನ ದರ್ಶನಕ್ಕೆ ಅವಕಾಶ ಸಿಗದಿದ್ದಕ್ಕೆ ನಿರಾಸೆ ಆಗಿದೆ. ಈ ಕುರಿತಾಗಿ ವಿಡಿಯೋ ಮಾಡಿರುವ ಬಾಗಲಕೋಟೆ (Bagalkote) ‌ಜಿಲ್ಲೆ ಇಳಕಲ್ ತಾಲ್ಲೂಕಿನ ಬಂಡರಗಲ್ ಗ್ರಾಮದ ಮುತ್ತು ಕರಮುಡಿ, ಏಪ್ರಿಲ್ 1 ರಂದು ಬಂಡರಗಲ್ ಗ್ರಾಮದಿಂದ ಪಾದಯಾತ್ರೆ ಆರಂಭಿಸಿ ಜೂನ್ 1 ಕ್ಕೆ 2000 ಕಿಮೀ ಪಾದಯಾತ್ರೆ ಮೂಲಕ ಬಂದು ತಲುಪಿದ್ದಾರೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು. ಲವ್ ಜಿಹಾದ್ ನಡೆಯಬಾರದು. ಹಿಂದು ಹೆಣ್ಮಕ್ಕಳ ರಕ್ಷಣೆಯಾಗಬೇಕು ಹೀಗೆ ಹಲವು ಹರಕೆ ಹೊತ್ತು ಅಯೋಧ್ಯೆ ಪಾದಯಾತ್ರೆ ಕೈಗೊಂಡಿದ್ದರು. ನನ್ನ ಹರಕೆಗಳಲ್ಲಿ ಒಂದಾದ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ಈಡೇರಿದಂತಾಗಿದೆ. ನನ್ನ ಎಲ್ಲ ಹರಕೆಗಳನ್ನು ರಾಮನ ಗರ್ಭಗುಡಿ ದ್ವಾರದ ಮುಂದೆ ನಿಂತು ಬೇಡಿಕೊಳ್ಳಬೇಕು.‌ ರಾಮನಿಗೆ ಅರ್ಪಿಸಬೇಕು‌. ಆದರೆ ಗರ್ಭಗುಡಿ ಮುಂದೆ ನಿಂತು ದರ್ಶನಕ್ಕೆ ಅವಕಾಶ ಕೊಡುತ್ತಿಲ್ಲ. ಇಲ್ಲಿ ಪಾದಯಾತ್ರೆ ಮಾಡಿಕೊಂಡು ಬಂದವರಿಗೆ ಬೆಲೆ‌ಕೊಡುತ್ತಿಲ್ಲ‌. ಅಯೋಧ್ಯೆ ಕಮೀಟಿ ಸರಿಯಾಗಿ ಸ್ಪಂದಿಸುತ್ತಿಲ್ಲ. ನನಗೆ ಗರ್ಭಗುಡಿ ‌ಮುಂದೆ ನಿಂತು ದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡಿ ಎಂದು ಮನವಿ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್