ಗುಳೇದಗುಡ್ಡ ಪಟ್ಟಣದಲ್ಲಿ ಹುಚ್ಚು ಕರಿಮಂಗನ ದಾಳಿ, 30ಕ್ಕೂ ಹೆಚ್ಚು ಜನರಿಗೆ ಗಾಯ

Edited By:

Updated on: Oct 10, 2025 | 11:21 AM

ಹುಚ್ಚುಹಿಡಿದ ಕರಿಮಂಗವೊಂದು (ಮುಸುವ) ಯದ್ವಾತದ್ವಾ ಜನರ ಮೇಲೆರಗಿದ್ದು, 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ಜನರು ಕೋಲು ಹಿಡಿದು ಓಡಿಸಲು ಯತ್ನಿಸಿದಾಗ ಕೈಯಲ್ಲೀ ಪ್ಲೇಟ್ ಹಿಡಿದು ಟೆರೇಸ್ ಮೇಲೇರಿ ಪ್ಲೇಟ್​ ಅನ್ನು ಬಡಿಯುತ್ತಾ, ಕುಣಿಯುತ್ತಾ ಚೇಷ್ಟೆ ಮಾಡಿದೆ. ಕಪಿಚೇಷ್ಟೆಯ ವಿಡಿಯೋ ಇಲ್ಲಿದೆ.

ಬಾಗಲಕೋಟೆ, ಅಕ್ಟೋಬರ್ 10: ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಹುಚ್ಚು ಕರಿಮಂಗ (ಮುಸುವ) ದಾಳಿ ಮಾಡಿದ್ದರಿಂದ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜನರ ತಲೆ, ಕೈ ಸೇರಿದಂತೆ ವಿವಿಧ ಕಡೆ ಮಂಗ ಕಚ್ಚಿ ಗಾಯಗೊಳಿಸಿದೆ. ಗುಳೇದಗುಡ್ಡ ಪಟ್ಟಣದ ಬಾಗವಾನ್ ಪೇಟೆ, ಹರದೊಳ್ಳಿ ದೇವಸ್ಥಾನ ವ್ಯಾಪ್ತಿಯಲ್ಲಿ ಮಂಗ ದಾಳಿ ಮಾಡಿದೆ. ಸದ್ಯ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜನ ಕೋಲು ಹಿಡಿದು ಮಂಗನ ಓಡಿಸಲು ಪ್ರಯತ್ನ ಪಟ್ಟಿದ್ದಾರೆ. ಅಷ್ಟರಲ್ಲಿ ಟೆರೇಸೊಂದರ ಮೇಲೇರಿದ ಮಂಗ ಕೈಯಲ್ಲಿ ಪ್ಲೇಟ್ ಹಿಡಿದು ಚೇಷ್ಟೆ ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More