AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಯುವಕರಿಂದ ಹಲ್ಲೆ

ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಯುವಕರಿಂದ ಹಲ್ಲೆ

ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: May 05, 2025 | 1:37 PM

ಮುಧೋಳದ ಜೈ ಮಲ್ಹಾರ್ ಹೆಚ್‌ಪಿ ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ಹಾಕುವ ತಡವಾದ ಹಿನ್ನೆಲೆ ನಾಲ್ವರು ಯುವಕರು ಪಂಪ್ ಕೆಲಸಗಾರರ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹಲ್ಲೆ ಮಾಡಿದ್ದು, ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದೆ. ಮೇ 2 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಗಲಕೋಟೆ, ಮೇ 05: ಬೈಕ್‌ಗೆ ಪೆಟ್ರೋಲ್ (petrol) ಹಾಕುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಕೆಲಸಗಾರರ ಮೇಲೆ ಯುವಕರಿಂದ ಹಲ್ಲೆ ಮಾಡಿರುವಂತ ಘಟನೆ ಜಿಲ್ಲೆಯ ಮುಧೋಳ ನಗರದ ಮಹಾಲಿಂಗಪುರ ರಸ್ತೆಯಲ್ಲಿರುವ ಜೈ ಮಲ್ಹಾರ್ ಹೆಚ್‌ಪಿ ಪೆಟ್ರೋಲ್ ಪಂಪ್​​ನಲ್ಲಿ ನಡೆದಿದೆ. ಪೆಟ್ರೋಲ್ ಹಾಕುವುದು ತಡವಾಗಿದ್ದಕ್ಕೆ ಪುಂಡರ ಗುಂಪಿನಿಂದ ಜಗಳ ಮಾಡಿ ಹಲ್ಲೆ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.