ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಯುವಕರಿಂದ ಹಲ್ಲೆ

Edited By:

Updated on: May 05, 2025 | 1:37 PM

ಮುಧೋಳದ ಜೈ ಮಲ್ಹಾರ್ ಹೆಚ್‌ಪಿ ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ಹಾಕುವ ತಡವಾದ ಹಿನ್ನೆಲೆ ನಾಲ್ವರು ಯುವಕರು ಪಂಪ್ ಕೆಲಸಗಾರರ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹಲ್ಲೆ ಮಾಡಿದ್ದು, ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದೆ. ಮೇ 2 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಗಲಕೋಟೆ, ಮೇ 05: ಬೈಕ್‌ಗೆ ಪೆಟ್ರೋಲ್ (petrol) ಹಾಕುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಕೆಲಸಗಾರರ ಮೇಲೆ ಯುವಕರಿಂದ ಹಲ್ಲೆ ಮಾಡಿರುವಂತ ಘಟನೆ ಜಿಲ್ಲೆಯ ಮುಧೋಳ ನಗರದ ಮಹಾಲಿಂಗಪುರ ರಸ್ತೆಯಲ್ಲಿರುವ ಜೈ ಮಲ್ಹಾರ್ ಹೆಚ್‌ಪಿ ಪೆಟ್ರೋಲ್ ಪಂಪ್​​ನಲ್ಲಿ ನಡೆದಿದೆ. ಪೆಟ್ರೋಲ್ ಹಾಕುವುದು ತಡವಾಗಿದ್ದಕ್ಕೆ ಪುಂಡರ ಗುಂಪಿನಿಂದ ಜಗಳ ಮಾಡಿ ಹಲ್ಲೆ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More