ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ.
ಬಾಗಲಕೋಟೆ, (ಫೆಬ್ರವರಿ 20): ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ.
ಇದೇ ವೇಳೆ ಟಿವಿ9ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಕೇವಲ ನಮ್ಮನ್ನ ಮಾತ್ರ ಶಾಂತಿ ಸಭೆಗೆ ಕರೆದಿದ್ದಾರೆ. ಮುಸ್ಲಿಂ ಸುಮುದಾಯದ ಮುಖಂಡರು ಸಭೆಗೆ ಹಾಜಾರಾಗಿಲ್ಲ. ಶಾಂತಿ ಸಭೆ ಅಂದರೆ ಎರಡು ಕಡೆಯವರು ಇರಬೇಕು. ಅವರಿಗೆ ಶಾಂತಿ ಬೇಕಿಲ್ಲ. ಹಾಗಾಗಿ ಅವರು ಬಂದಿಲ್ಲ. ಡಿಸಿ,ಎಸ್ ಪಿ ಎಲ್ಲರೂ ಕರೆದ ಸಭೆಗೆ ಅವರು ಬರೋದಿಲ್ಲ ಅಂದರೆ ಎಷ್ಟಿರಬೇಕು? ಅದಕ್ಕೆ ಹೇಳೋದು ಇದು ಕಾಂಗ್ರೆಸ್ ಓಲೈಕೆಯ ಪರಿಣಾಮ ಅಂತ. ನಾವು ಯಾವುದಕ್ಕೂ ಸುಮ್ಮನೆ ಇರುವುದಿಲ್ಲ. ಎಲ್ಲಿ ಶಿವಾಜಿ ಮೂರ್ತಿಗೆ ಕಲ್ಲು ಹೊಡೆದಿದ್ದಾರೆ ಅದೇ ಜಾಗದಿಂದ ಪುಷ್ಪಗಳ ವೃಷ್ಟಿಗೈದು ಶಿವಾಜಿ ಮೆರವಣಿಗೆ ಮಾಡುತ್ತೇವೆ. ಯಾವಾಗ ಶಿವಾಜಿ ಮೆರವಣಿಗೆ ಮಾಡುತ್ತೇವೆ ಎನ್ನುವುದನ್ನು ನಂತರ ತಿಳಿಸುತ್ತೇವೆ ಎಂದರು.
ಇದನ್ನೂ ಓದಿ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್ನಿಂದ ನೋಟಿಸ್
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!

