AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕೋಪಕ್ಕೆ ತಿರಗಿದ ಕಬ್ಬು ಬೆಳೆಗಾರರ ಹೋರಾಟ: ಕಿಡಿಗೇಡಿಗಳಿಂದ ಕಲ್ಲು ತೂರಾಟ

ವಿಕೋಪಕ್ಕೆ ತಿರಗಿದ ಕಬ್ಬು ಬೆಳೆಗಾರರ ಹೋರಾಟ: ಕಿಡಿಗೇಡಿಗಳಿಂದ ಕಲ್ಲು ತೂರಾಟ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Nov 03, 2025 | 7:33 PM

Share

ಬಾಗಲಕೋಟೆಯ ಜಮಖಂಡಿ ತಾಲೂಕಿನ ಸಿದ್ದಾಪುರದಲ್ಲಿ ಕಬ್ಬು ಬೆಳೆಗಾರ ರೈತರ ಹೋರಾಟ ವಿಕೋಪಕ್ಕೆ ತಿರುಗಿದೆ. ಬಾಕಿ ಬಿಲ್ ಪಾವತಿ ಮತ್ತು ಕಬ್ಬಿನ ದರ ನಿಗದಿಗಾಗಿ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಎದುರು ನಡೆದ ಪ್ರತಿಭಟನೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ. ಕಾರ್ಖಾನೆ ಆವರಣದಲ್ಲಿದ್ದ ವಾಹನಗಳು ಹಾಗೂ ಕಚೇರಿ ಗಾಜುಗಳು ಪುಡಿಪುಡಿಯಾಗಿವೆ.

ಬಾಗಲಕೋಟೆ, ನವೆಂಬರ್​ 03: ಬಾಕಿ ಬಿಲ್‌ ಪಾವತಿ, ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರು ನಡೆಸಿದ್ದ ಹೋರಾಟ ವಿಕೋಪಕ್ಕೆ ತಿರುಗಿದ್ದು ಕಿಡಿಗೇಡಿಗಳಿಂದ ಕಲ್ಲು ತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ನಡೆದಿದೆ. ಕಾರ್ಖಾನೆ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳು ಮತ್ತು ಕಚೇರಿ ಮೇಲೆ ಕಲ್ಲೆಸೆಯಲಾಗಿದ್ದು, ಬೊಲೆರೊ ವಾಹನ ಸೇರಿ ಹಲವು ವಾಹನಗಳ ಗಾಜು ಪುಡಿಪುಡಿ ಆಗಿವೆ. ಸದ್ಯ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಶಾಂತ ಸ್ಥಿತಿಗೆ ಮರಳಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 03, 2025 07:28 PM
Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More